<p><strong>ಮೂಡುಬಿದಿರೆ:</strong> ಸಮಾಜದಲ್ಲಿ ಅಂಕುಡೊಂಕುಗಳನ್ನು ತಿದ್ದಿ, ಉತ್ತಮ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು. ಮೂಡುಬಿದಿರೆ ಪತ್ರಕರ್ತರದ ಸಂಘದ ನೂತನ ಪತ್ರಿಕಾ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಶೀಘ್ರ ₹ 25 ಲಕ್ಷ ಅನುದಾನ ಮಂಜೂರು ಮಾಡಿಸಲಾಗುವುದು ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದರು.</p>.<p>ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ನಡೆದ ಮಾಧ್ಯಮ ಹಬ್ಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ, ತಪ್ಪಿಗೆ ಕ್ಷಮೆ ಇದೆ. ಮೋಸಕ್ಕೆ ಕ್ಷಮೆ ಇಲ್ಲ. ಜನರ ಮನಸ್ಥಿತಿಯನ್ನು ಒಳ್ಳೆಯ ವಿಚಾರಕ್ಕೆ ಬದಲಾಯಿಸಲು ಪತ್ರಿಕೆಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು.</p>.<p>ಸಂಘದ ಅಧ್ಯಕ್ಷ ಬೆಳುವಾಯಿ ಸೀತಾರಾಮ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ವಾಲ್ಟರ್ ನಂದಳಿಕೆ, ಭವಿಷ್ಯದಲ್ಲಿ ಮಾಧ್ಯಮಗಳಿಗಿರುವ ಸವಾಲುಗಳು ವಿಷಯದ ಕುರಿತು ಉಪನ್ಯಾಸ ನೀಡಿದರು.</p>.<p>ಕನ್ನಡ ಸುದ್ದಿವಾಹಿನಿಯ ಸುದ್ದಿ ನಿರೂಪಕ ವಾಸುದೇವ ಭಟ್ ಮಾರ್ನಡು ಅವರಿಗೆ ಪ್ರೆಸ್ ಕ್ಲಬ್ ಗೌರವ ನೀಡಿ ಸನ್ಮಾನಿಸಲಾಯಿತು.</p>.<p>ಎಸ್ಎಸ್ಎಲ್ಸಿ ಸಾಧಕರಾದ ರುಚಿರಾ ಕುಂದರ್, ಸುಶಾಂತ್ ದರೆಗುಡ್ಡೆ, ಸಿಂಚನಾ ಮೂಡುಮಾರ್ನಡು ಅವರನ್ನು ಗೌರವಿಸಲಾಯಿತು.</p>.<p>ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪಾಲ್ಗೊಂಡಿದ್ದರು. ಅಶ್ರಫ್ ವಾಲ್ಪಾಡಿ ನಿರೂಪಿಸಿದರು. ಪ್ರಸನ್ನ ಹೆಗ್ಡೆ, ಜೈಸನ್ ತಾಕೊಡೆ, ನವೀನ್ ಸಾಲ್ಯಾನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ಸಮಾಜದಲ್ಲಿ ಅಂಕುಡೊಂಕುಗಳನ್ನು ತಿದ್ದಿ, ಉತ್ತಮ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು. ಮೂಡುಬಿದಿರೆ ಪತ್ರಕರ್ತರದ ಸಂಘದ ನೂತನ ಪತ್ರಿಕಾ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಶೀಘ್ರ ₹ 25 ಲಕ್ಷ ಅನುದಾನ ಮಂಜೂರು ಮಾಡಿಸಲಾಗುವುದು ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದರು.</p>.<p>ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ನಡೆದ ಮಾಧ್ಯಮ ಹಬ್ಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ, ತಪ್ಪಿಗೆ ಕ್ಷಮೆ ಇದೆ. ಮೋಸಕ್ಕೆ ಕ್ಷಮೆ ಇಲ್ಲ. ಜನರ ಮನಸ್ಥಿತಿಯನ್ನು ಒಳ್ಳೆಯ ವಿಚಾರಕ್ಕೆ ಬದಲಾಯಿಸಲು ಪತ್ರಿಕೆಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು.</p>.<p>ಸಂಘದ ಅಧ್ಯಕ್ಷ ಬೆಳುವಾಯಿ ಸೀತಾರಾಮ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ವಾಲ್ಟರ್ ನಂದಳಿಕೆ, ಭವಿಷ್ಯದಲ್ಲಿ ಮಾಧ್ಯಮಗಳಿಗಿರುವ ಸವಾಲುಗಳು ವಿಷಯದ ಕುರಿತು ಉಪನ್ಯಾಸ ನೀಡಿದರು.</p>.<p>ಕನ್ನಡ ಸುದ್ದಿವಾಹಿನಿಯ ಸುದ್ದಿ ನಿರೂಪಕ ವಾಸುದೇವ ಭಟ್ ಮಾರ್ನಡು ಅವರಿಗೆ ಪ್ರೆಸ್ ಕ್ಲಬ್ ಗೌರವ ನೀಡಿ ಸನ್ಮಾನಿಸಲಾಯಿತು.</p>.<p>ಎಸ್ಎಸ್ಎಲ್ಸಿ ಸಾಧಕರಾದ ರುಚಿರಾ ಕುಂದರ್, ಸುಶಾಂತ್ ದರೆಗುಡ್ಡೆ, ಸಿಂಚನಾ ಮೂಡುಮಾರ್ನಡು ಅವರನ್ನು ಗೌರವಿಸಲಾಯಿತು.</p>.<p>ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪಾಲ್ಗೊಂಡಿದ್ದರು. ಅಶ್ರಫ್ ವಾಲ್ಪಾಡಿ ನಿರೂಪಿಸಿದರು. ಪ್ರಸನ್ನ ಹೆಗ್ಡೆ, ಜೈಸನ್ ತಾಕೊಡೆ, ನವೀನ್ ಸಾಲ್ಯಾನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>