<p>ನೆಲ್ಯಾಡಿ(ಉಪ್ಪಿನಂಗಡಿ): ನೆಲ್ಯಾಡಿ ಪೇಟೆಯಲ್ಲಿ ಹೆಚ್ಚುವರಿಯಾಗಿ 3 ಅಂಡರ್ಪಾಸ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಗೆ ದ.ಕ. ಸಂಸದ ಬ್ರಿಜೇಶ್ ಚೌಟ ಭರವಸೆ ನೀಡಿದ್ದಾರೆ.</p>.<p>ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ನೆಲ್ಯಾಡಿ ಪೇಟೆಯಲ್ಲಿ ಎರಡು ಬದಿ ಸರ್ವೀಸ್ ರಸ್ತೆಯ ಪಕ್ಕ ತಡೆಗೋಡೆ ನಿರ್ಮಿಸಿ, ಎತ್ತರಿಸಿದ ರಸ್ತೆ ನಿರ್ಮಿಸಲಾಗುತ್ತಿದೆ. ಈ ರೀತಿ ರಸ್ತೆ ನಿರ್ಮಾಣ ಮಾಡುತ್ತಿರುವುದರಿಂದ ನೆಲ್ಯಾಡಿ ಪೇಟೆ ಇಬ್ಭಾಗವಾಗಲಿದೆ. ಇದರಿಂದ ವರ್ತಕರಿಗೆ, ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಆದ್ದರಿಂದ ನೆಲ್ಯಾಡಿ ಪೇಟೆಯಲ್ಲಿ ಕಲ್ಲಡ್ಕ ಮಾದರಿಯಲ್ಲಿಯೇ ಮೇಲ್ಸೇತುವೆ ಹೆದ್ದಾರಿ ನಿರ್ಮಿಸಬೇಕೆಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿರುವುದರಿಂದ ನೆಲ್ಯಾಡಿ ಪೇಟೆಯಲ್ಲಿನ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದೆ.</p>.<p>ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಯವರು ಸಂಸದರನ್ನು ಭೇಟಿ ಮಾಡಿ, ನೆಲ್ಯಾಡಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. </p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು ಇಲ್ಲಿ ಈಗಾಗಲೇ 2 ಅಂಡರ್ಪಾಸ್ ಮಾಡಲಾಗಿದೆ. ಹೆದ್ದಾರಿ ನಿರ್ಮಾಣ ಕಾಮಗಾರಿಯೂ ಅರ್ಧದಷ್ಟು ಮುಗಿದಿದೆ. ಪೇಟೆಯಲ್ಲಿ ಹೆಚ್ಚುವರಿಯಾಗಿ ಮತ್ತೆ ಮೂರು ಅಂಡರ್ಪಾಸ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. </p>.<p>ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಎ.ಕೆ. ವರ್ಗೀಸ್, ನೆಲ್ಯಾಡಿ-ಕೌಕ್ರಾಡಿ ವರ್ತಕ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್, ಪದಾಧಿಕಾರಿಗಳಾದ ಸರ್ವೋತ್ತಮ ಗೌಡ, ಪಿ.ಪಿ. ವರ್ಗೀಸ್, ಉಷಾ ಅಂಚನ್, ನಾಝೀಂ ಸಾಹೇಬ್, ಕೆ.ಪಿ. ಥಾಮಸ್, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಉಷಾ ಅಂಚನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನೆಲ್ಯಾಡಿ(ಉಪ್ಪಿನಂಗಡಿ): ನೆಲ್ಯಾಡಿ ಪೇಟೆಯಲ್ಲಿ ಹೆಚ್ಚುವರಿಯಾಗಿ 3 ಅಂಡರ್ಪಾಸ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಗೆ ದ.ಕ. ಸಂಸದ ಬ್ರಿಜೇಶ್ ಚೌಟ ಭರವಸೆ ನೀಡಿದ್ದಾರೆ.</p>.<p>ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ನೆಲ್ಯಾಡಿ ಪೇಟೆಯಲ್ಲಿ ಎರಡು ಬದಿ ಸರ್ವೀಸ್ ರಸ್ತೆಯ ಪಕ್ಕ ತಡೆಗೋಡೆ ನಿರ್ಮಿಸಿ, ಎತ್ತರಿಸಿದ ರಸ್ತೆ ನಿರ್ಮಿಸಲಾಗುತ್ತಿದೆ. ಈ ರೀತಿ ರಸ್ತೆ ನಿರ್ಮಾಣ ಮಾಡುತ್ತಿರುವುದರಿಂದ ನೆಲ್ಯಾಡಿ ಪೇಟೆ ಇಬ್ಭಾಗವಾಗಲಿದೆ. ಇದರಿಂದ ವರ್ತಕರಿಗೆ, ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಆದ್ದರಿಂದ ನೆಲ್ಯಾಡಿ ಪೇಟೆಯಲ್ಲಿ ಕಲ್ಲಡ್ಕ ಮಾದರಿಯಲ್ಲಿಯೇ ಮೇಲ್ಸೇತುವೆ ಹೆದ್ದಾರಿ ನಿರ್ಮಿಸಬೇಕೆಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿರುವುದರಿಂದ ನೆಲ್ಯಾಡಿ ಪೇಟೆಯಲ್ಲಿನ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದೆ.</p>.<p>ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಯವರು ಸಂಸದರನ್ನು ಭೇಟಿ ಮಾಡಿ, ನೆಲ್ಯಾಡಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. </p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು ಇಲ್ಲಿ ಈಗಾಗಲೇ 2 ಅಂಡರ್ಪಾಸ್ ಮಾಡಲಾಗಿದೆ. ಹೆದ್ದಾರಿ ನಿರ್ಮಾಣ ಕಾಮಗಾರಿಯೂ ಅರ್ಧದಷ್ಟು ಮುಗಿದಿದೆ. ಪೇಟೆಯಲ್ಲಿ ಹೆಚ್ಚುವರಿಯಾಗಿ ಮತ್ತೆ ಮೂರು ಅಂಡರ್ಪಾಸ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. </p>.<p>ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಎ.ಕೆ. ವರ್ಗೀಸ್, ನೆಲ್ಯಾಡಿ-ಕೌಕ್ರಾಡಿ ವರ್ತಕ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್, ಪದಾಧಿಕಾರಿಗಳಾದ ಸರ್ವೋತ್ತಮ ಗೌಡ, ಪಿ.ಪಿ. ವರ್ಗೀಸ್, ಉಷಾ ಅಂಚನ್, ನಾಝೀಂ ಸಾಹೇಬ್, ಕೆ.ಪಿ. ಥಾಮಸ್, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಉಷಾ ಅಂಚನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>