ಕಳ್ಳತನ ನಡೆದಿರುವ ಮನೆಯಲ್ಲಿ ಯಜಮಾನ ಸುರೇಶ್, ಅವರ ಪತ್ನಿ ಪೂರ್ಣಿಮಾ, ಮಕ್ಕಳಾದ ದುರ್ಗಾ, ಲಕ್ಷ್ಮೀ ಸಾಗರ್, ವಿದ್ಯಾಸಾಗರ್ ಇದ್ದರು. ಬೆಳಿಗ್ಗೆ ಎದ್ದಾಗ ಮನೆಯ ಹಿಂದಿನ ಮತ್ತು ಎದುರಿನ ಬಾಗಿಲು ತೆರೆದುಕೊಂಡಿತ್ತು. ಬಳಿಕ ಕಪಾಟು ನೋಡುವಾಗ ಅದರ ಬಾಗಿಲು ತೆರೆದ ಸ್ಥಿತಿಯಲ್ಲಿ ಇದ್ದು, ಅದರೊಳಗೆ ಇದ್ದ ಚಿನ್ನಾಭರಣ ಕಳವು ಆಗಿರುವುದು ಬೆಳಕಿಗೆ ಬಂದಿದೆ.