<p><strong>ಉಜಿರೆ (ದಕ್ಷಿಣ ಕನ್ನಡ):</strong> ಗ್ರಾಮೀಣ ಪ್ರದೇಶಗಳಲ್ಲಿ ವಿಪತ್ತು ಸಂಭವಿಸಿದಾಗ ತುರ್ತು ನೆರವು ಮತ್ತು ರಕ್ಷಣೆಗಾಗಿ ಮೂರು ಸಾವಿರ ‘ಶೌರ್ಯ’ ಸ್ವಯಂ ಸೇವಕರ ತಂಡಗಳನ್ನು ರಚಿಸಲಾಗಿದೆ. ಸದ್ಯದಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>ಧರ್ಮಸ್ಥಳದಲ್ಲಿ ಸೋಮವಾರ ನಡೆದ, ತಮ್ಮ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭದಲ್ಲಿ ಅವರು ಈ ಯೋಜನೆ ಪ್ರಕಟಿಸಿದರು.</p>.<p>ಸರ್ಕಾರದ ಸೇವೆಗಳನ್ನು ಜನರಿಗೆ ತಲುಪಿಸಲು ಈಗಾಗಲೇ ಧರ್ಮಸ್ಥಳ ಸಂಸ್ಥೆಯಿಂದ 6,500 ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಿದ್ದು, ಈ ವರ್ಷ ಇನ್ನೂ ಒಂದು ಸಾವಿರ ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.</p>.<p>ರಾಜ್ಯದಲ್ಲಿ 365 ಸರ್ಕಾರಿ ಶಾಲೆಗಳಿಗೆ 2700 ಬೆಂಚು-ಡೆಸ್ಕ್ಗಳನ್ನು ವಿತರಿಸಲಾಗುವುದು. ಈ ವರ್ಷ 100 ಕೆರೆಗಳ ಹೂಳೆತ್ತಿ ಪುನಶ್ಚೇತನಕ್ಕೆ ಯೋಜನೆ ರೂಪಿಸಲಾಗಿದೆ. 40 ಶುದ್ಧಗಂಗಾ ಘಟಕಗಳ ಮೂಲಕ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು. ಉಜಿರೆಯಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ₹ 47 ಲಕ್ಷ ನೆರವು ನೀಡಲಾಗುವುದು. ಅನಾಥ ಹಿರಿಯ ನಾಗರಿಕರ ಪಾಲನೆ ಮತ್ತು ಪೋಷಣೆಗಾಗಿ ₹ 5 ಕೋಟಿ ವೆಚ್ಚದಲ್ಲಿ 500 ಮನೆಗಳನ್ನು ನಿರ್ಮಿಸಲಾಗುವುದು ಎಂದು ಹೆಗ್ಗಡೆಯವರು ಹೇಳಿದರು.</p>.<p>ಕಳೆದ ವರ್ಷ ₹ 6 ಕೋಟಿ ವೆಚ್ಚದಲ್ಲಿ ಮೂರು ಆಸ್ಪತ್ರೆಗಳಿಗೆ ಮೂರು ಸಿ.ಟಿ. ಸ್ಕ್ಯಾನ್ ಯಂತ್ರಗಳನ್ನು ನೀಡಿದ್ದು, ಈ ವರ್ಷ ಇನ್ನೂ ಮೂರು ಸಿ.ಟಿ. ಸ್ಕ್ಯಾನ್ ಯಂತ್ರಗಳನ್ನು ನೀಡಲಾಗುವುದು.ಮೈಸೂರಿನಲ್ಲಿ ವಸ್ತುಸಂಗ್ರಹಾಲಯ ಸ್ಥಾಪಿಸಲಾಗುವುದು ಎಂದು ತಿಳಿಸಿದರು.</p>.<p>ಈ ವರ್ಷ 7,312 ದೇವಸ್ಥಾನಗಳಿಗೆ ₹ 89 ಕೋಟಿ ನೆರವು ನೀಡಲಾಗಿದೆ. ಧಾರವಾಡದಲ್ಲಿ 200 ಹಾಸಿಗೆ ಸಾಮರ್ಥ್ಯದ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಶೀಘ್ರವೇ ಪ್ರಾರಂಭಗೊಳ್ಳಲಿದೆ. ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಕಾಮಗಾರಿ ವರ್ಷದೊಳಗೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.</p>.<p>ತಮ್ಮ ರಾಜ್ಯಸಭಾ ಸದಸ್ಯರ ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ಬೀದರ್ ಜಿಲ್ಲೆಯಲ್ಲಿ ಹಾಲು ಉತ್ಪಾದನೆಗೆ ಪ್ರೋತ್ಸಾಹ ನೀಡಲು ಉದ್ದೇಶಿಸಿದ್ದು ಈಗಾಗಲೇ ಸಮೀಕ್ಷೆ ನಡೆಸಲಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ (ದಕ್ಷಿಣ ಕನ್ನಡ):</strong> ಗ್ರಾಮೀಣ ಪ್ರದೇಶಗಳಲ್ಲಿ ವಿಪತ್ತು ಸಂಭವಿಸಿದಾಗ ತುರ್ತು ನೆರವು ಮತ್ತು ರಕ್ಷಣೆಗಾಗಿ ಮೂರು ಸಾವಿರ ‘ಶೌರ್ಯ’ ಸ್ವಯಂ ಸೇವಕರ ತಂಡಗಳನ್ನು ರಚಿಸಲಾಗಿದೆ. ಸದ್ಯದಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>ಧರ್ಮಸ್ಥಳದಲ್ಲಿ ಸೋಮವಾರ ನಡೆದ, ತಮ್ಮ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭದಲ್ಲಿ ಅವರು ಈ ಯೋಜನೆ ಪ್ರಕಟಿಸಿದರು.</p>.<p>ಸರ್ಕಾರದ ಸೇವೆಗಳನ್ನು ಜನರಿಗೆ ತಲುಪಿಸಲು ಈಗಾಗಲೇ ಧರ್ಮಸ್ಥಳ ಸಂಸ್ಥೆಯಿಂದ 6,500 ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಿದ್ದು, ಈ ವರ್ಷ ಇನ್ನೂ ಒಂದು ಸಾವಿರ ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.</p>.<p>ರಾಜ್ಯದಲ್ಲಿ 365 ಸರ್ಕಾರಿ ಶಾಲೆಗಳಿಗೆ 2700 ಬೆಂಚು-ಡೆಸ್ಕ್ಗಳನ್ನು ವಿತರಿಸಲಾಗುವುದು. ಈ ವರ್ಷ 100 ಕೆರೆಗಳ ಹೂಳೆತ್ತಿ ಪುನಶ್ಚೇತನಕ್ಕೆ ಯೋಜನೆ ರೂಪಿಸಲಾಗಿದೆ. 40 ಶುದ್ಧಗಂಗಾ ಘಟಕಗಳ ಮೂಲಕ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು. ಉಜಿರೆಯಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ₹ 47 ಲಕ್ಷ ನೆರವು ನೀಡಲಾಗುವುದು. ಅನಾಥ ಹಿರಿಯ ನಾಗರಿಕರ ಪಾಲನೆ ಮತ್ತು ಪೋಷಣೆಗಾಗಿ ₹ 5 ಕೋಟಿ ವೆಚ್ಚದಲ್ಲಿ 500 ಮನೆಗಳನ್ನು ನಿರ್ಮಿಸಲಾಗುವುದು ಎಂದು ಹೆಗ್ಗಡೆಯವರು ಹೇಳಿದರು.</p>.<p>ಕಳೆದ ವರ್ಷ ₹ 6 ಕೋಟಿ ವೆಚ್ಚದಲ್ಲಿ ಮೂರು ಆಸ್ಪತ್ರೆಗಳಿಗೆ ಮೂರು ಸಿ.ಟಿ. ಸ್ಕ್ಯಾನ್ ಯಂತ್ರಗಳನ್ನು ನೀಡಿದ್ದು, ಈ ವರ್ಷ ಇನ್ನೂ ಮೂರು ಸಿ.ಟಿ. ಸ್ಕ್ಯಾನ್ ಯಂತ್ರಗಳನ್ನು ನೀಡಲಾಗುವುದು.ಮೈಸೂರಿನಲ್ಲಿ ವಸ್ತುಸಂಗ್ರಹಾಲಯ ಸ್ಥಾಪಿಸಲಾಗುವುದು ಎಂದು ತಿಳಿಸಿದರು.</p>.<p>ಈ ವರ್ಷ 7,312 ದೇವಸ್ಥಾನಗಳಿಗೆ ₹ 89 ಕೋಟಿ ನೆರವು ನೀಡಲಾಗಿದೆ. ಧಾರವಾಡದಲ್ಲಿ 200 ಹಾಸಿಗೆ ಸಾಮರ್ಥ್ಯದ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಶೀಘ್ರವೇ ಪ್ರಾರಂಭಗೊಳ್ಳಲಿದೆ. ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಕಾಮಗಾರಿ ವರ್ಷದೊಳಗೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.</p>.<p>ತಮ್ಮ ರಾಜ್ಯಸಭಾ ಸದಸ್ಯರ ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ಬೀದರ್ ಜಿಲ್ಲೆಯಲ್ಲಿ ಹಾಲು ಉತ್ಪಾದನೆಗೆ ಪ್ರೋತ್ಸಾಹ ನೀಡಲು ಉದ್ದೇಶಿಸಿದ್ದು ಈಗಾಗಲೇ ಸಮೀಕ್ಷೆ ನಡೆಸಲಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>