ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

233 ಮಂದಿಗೆ ಕೋವಿಡ್; 404 ಗುಣಮುಖ

ಐಎಲ್‌ಐ, ಪ್ರಾಥಮಿಕ ಸಂಪರ್ಕದಿಂದಲೇ ಸೋಂಕು ಹೆಚ್ಚಳ
Last Updated 21 ಸೆಪ್ಟೆಂಬರ್ 2020, 16:53 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಲ್ಲಿ ಸೋಮವಾರ ಗುಣಮುಖರ ಸಂಖ್ಯೆ ಅಧಿಕವಾಗಿದ್ದು, 404 ಜನರು ಚೇತರಿಸಿಕೊಂಡಿದ್ದಾರೆ. ಮತ್ತೆ 233 ಜನರಿಗೆ ಕೋವಿಡ್–19 ದೃಢವಾಗಿದೆ. ಮೃತಪಟ್ಟಿರುವ 8 ಜನರಿಗೆ ಕೋವಿಡ್–19 ಇರುವುದು ಖಚಿತವಾಗಿದೆ.

ಗುಣಮುಖರಾದವರ ಪೈಕಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 185 ಜನರು ಹಾಗೂ ಯಾವುದೇ ರೋಗ ಲಕ್ಷಣಗಳಿಲ್ಲದೇ ಹೋಂ ಐಸೋಲೇಷನ್‌ನಲ್ಲಿದ್ದ 219 ಮಂದಿಯ ಗಂಟಲು ದ್ರವ ಮಾದರಿ ವರದಿ ನೆಗೆಟಿವ್‌ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಐಎಲ್‌ಐ ಅಧಿಕ: ಜಿಲ್ಲೆಯಲ್ಲಿ ದೃಢವಾಗಿರುವ 233 ಪ್ರಕರಣಗಳಲ್ಲಿ ಶೀತ ಜ್ವರ (ಐಎಲ್‌ಐ)ದಿಂದ ಸೋಂಕು ತಗಲಿದವರೇ ಹೆಚ್ಚಾಗಿದ್ದಾರೆ. ಒಟ್ಟು 105 ಜನರಲ್ಲಿ ಶೀತ ಜ್ವರ ಲಕ್ಷಣಗಳು ಕಂಡು ಬಂದಿದ್ದು, 9 ಮಂದಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದ ಕೋವಿಡ್ ದೃಢವಾಗಿದೆ. 78 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದ್ದರೆ, 41 ಮಂದಿಯ ಸಂಪರ್ಕವನ್ನು ಪತ್ತೆ ಮಾಡಲಾಗುತ್ತಿದೆ.

ಮಂಗಳೂರು ತಾಲ್ಲೂಕಿನ 122, ಬಂಟ್ವಾಳದ 53, ಪುತ್ತೂರಿನ 6, ಸುಳ್ಯದ 5, ಬೆಳ್ತಂಗಡಿ ತಾಲ್ಲೂಕಿನ 10 ಹಾಗೂ ಬೇರೆ ಜಿಲ್ಲೆಗಳ 37 ಜನರಿಗೆ ಕೋವಿಡ್–19 ಖಚಿತವಾಗಿದೆ. ಈ ಪೈಕಿ 76 ಪುರುಷರು, 50 ಮಹಿಳೆಯರು ಸೇರಿದಂತೆ 126 ಜನರಲ್ಲಿ ರೋಗ ಲಕ್ಷಣಗಳು ಪತ್ತೆಯಾಗಿವೆ. 60 ಪುರುಷರು, 47 ಮಹಿಳೆಯರು ಸೇರಿದಂತೆ 107 ಜನರಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲ.

8 ಸಾವು: ಅನಾರೋಗ್ಯದ ಸಮಸ್ಯೆಯಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಜನರು ಮೃತಪಟ್ಟಿದ್ದು, ಅವರಿಗೆ ಕೋವಿಡ್–19 ಇರುವುದು ಸೋಮವಾರ ದೃಢವಾಗಿದೆ. ಮಂಗಳೂರು ತಾಲ್ಲೂಕಿನ ಐವರು, ಬೆಳ್ತಂಗಡಿ, ಸುಳ್ಯ ಹಾಗೂ ಬೇರೆ ಜಿಲ್ಲೆಯ ತಲಾ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಕಾಸರಗೋಡು: 110 ಜನರಿಗೆ ಸೋಂಕು

ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 110 ಜನರಿಗೆ ಕೋವಿಡ್–19 ದೃಢವಾಗಿದ್ದು, ಈ ಪೈಕಿ 101 ಜನರಿಗೆ ಸಂಪರ್ಕದಿಂದ ಸೋಂಕು ತಗಲಿದೆ.

ಸೋಮವಾರ 176 ಮಂದಿ ಗುಣಮುಖರಾಗಿದ್ದು, ಸದ್ಯಕ್ಕೆ ಜಿಲ್ಲೆಯಲ್ಲಿ 1,901 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮದಾಸ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT