<p><strong>ಮಂಗಳೂರು</strong>: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 424 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 72 ಮಂದಿ ಗುಣಮುಖರಾಗಿದ್ದಾರೆ.</p>.<p>ಜಿಲ್ಲೆಯಲ್ಲಿ 400 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದ್ದು, 3,258 ಸಕ್ರಿಯ ಪ್ರಕರಣಗಳಿವೆ. 10,130 ಮಂದಿ ನಿಗಾದಲ್ಲಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 35,438 ಮಂದಿಗೆ ಸೋಂಕು ದೃಢಪಟ್ಟಿದ್ದು, 31,855 ಮಂದಿ ಗುಣಮುಖರಾಗಿದ್ದಾರೆ.</p>.<p><strong>ಮತ್ತಷ್ಟು ಕಠಿಣ ನಿಯಮ:</strong></p>.<p>ಕೋವಿಡ್ ಸೋಂಕಿನ ಎರಡನೇ ಅಲೆ ತಡೆಗೆ ಕೇರಳದಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಅಂಗಡಿ ಮುಂಗಟ್ಟು ಹೋಟೆಲ್ಗಳ ಮೇಲೆ ನಿರ್ಬಂಧ ಹೇರಲಾಗಿದೆ. ರಾತ್ರಿ 9 ಗಂಟೆಯೊಳಗೆ ಮುಚ್ಚಲು ಆದೇಶ ಹೊರಡಿಸಲಾಗಿದೆ.</p>.<p>ವಿವಾಹ, ಇನ್ನಿತರ ಸಮಾರಂಭಗಳಿಗೆ ಹಾಲ್ಗಳಲ್ಲಿ 100, ತೆರೆದ ಸ್ಥಳಗಳಲ್ಲಿ 200 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಬಸ್, ರೈಲುಗಳಲ್ಲಿ ನಿಂತು ಪ್ರಯಾಣಕ್ಕೆ ಅನುಮತಿ ಇಲ್ಲ. ಆಸನಕ್ಕೆ ಮಾತ್ರ ಪ್ರಯಾಣಿಕರನ್ನು ಸೀಮಿತಗೊಳಿಸಬೇಕು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಿದೆ.</p>.<p>ಎಲ್ಲ ಕಾರ್ಯಕ್ರಮಗಳನ್ನು ಎರಡು ಗಂಟೆಯೊಳಗೆ ಮುಗಿಸಬೇಕು. ಆಹಾರ ಪೂರೈಕೆ ಪಾರ್ಸೆಲ್ ಆಗಿ ನೀಡಬೇಕು. ರಂಜಾನ್ ಅಂಗವಾಗಿ ಇಫ್ತಾರ್ ಕೂಟಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಮಿತಿ ಮೀರದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ.</p>.<p>ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಸ್ಥಳಗಳನ್ನು ಗುರುತಿಸಿ ಕಂಟೈನ್ಮೆಂಟ್ ವಲಯವಾಗಿ ಘೋಷಿಸಲು ಆಯಾ ಜಿಲ್ಲಾಡಳಿತಕ್ಕೆ ಅನುಮತಿ ನೀಡಲಾಗಿದೆ.</p>.<p class="Briefhead"><strong>ದ.ಕ: 140 ಮಂದಿಗೆ ಕೋವಿಡ್</strong></p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 140 ಮಂದಿಗೆ ಕೋವಿಡ್–19 ದೃಢವಾಗಿದೆ. 97 ಜನರು ಗುಣಮುಖರಾಗಿದ್ದಾರೆ.</p>.<p>ಇದುವರೆಗೆ 6.74 ಲಕ್ಷ ಜನರ ಗಂಟಲು ದ್ರವ ತಪಾಸಣೆ ಮಾಡಲಾಗಿದ್ದು, 6.37 ಲಕ್ಷ ಜನರ ವರದಿ ನೆಗೆಟಿವ್ ಬಂದಿದೆ. ಒಟ್ಟು 37,140 ಜನರಿಗೆ ಕೋವಿಡ್–19 ದೃಢವಾಗಿದ್ದು, 35,245 ಮಂದಿ ಗುಣಮುಖರಾಗಿದ್ದಾರೆ. ಸದ್ಯ 1,152 ಸಕ್ರಿಯ ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 424 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 72 ಮಂದಿ ಗುಣಮುಖರಾಗಿದ್ದಾರೆ.</p>.<p>ಜಿಲ್ಲೆಯಲ್ಲಿ 400 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದ್ದು, 3,258 ಸಕ್ರಿಯ ಪ್ರಕರಣಗಳಿವೆ. 10,130 ಮಂದಿ ನಿಗಾದಲ್ಲಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 35,438 ಮಂದಿಗೆ ಸೋಂಕು ದೃಢಪಟ್ಟಿದ್ದು, 31,855 ಮಂದಿ ಗುಣಮುಖರಾಗಿದ್ದಾರೆ.</p>.<p><strong>ಮತ್ತಷ್ಟು ಕಠಿಣ ನಿಯಮ:</strong></p>.<p>ಕೋವಿಡ್ ಸೋಂಕಿನ ಎರಡನೇ ಅಲೆ ತಡೆಗೆ ಕೇರಳದಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಅಂಗಡಿ ಮುಂಗಟ್ಟು ಹೋಟೆಲ್ಗಳ ಮೇಲೆ ನಿರ್ಬಂಧ ಹೇರಲಾಗಿದೆ. ರಾತ್ರಿ 9 ಗಂಟೆಯೊಳಗೆ ಮುಚ್ಚಲು ಆದೇಶ ಹೊರಡಿಸಲಾಗಿದೆ.</p>.<p>ವಿವಾಹ, ಇನ್ನಿತರ ಸಮಾರಂಭಗಳಿಗೆ ಹಾಲ್ಗಳಲ್ಲಿ 100, ತೆರೆದ ಸ್ಥಳಗಳಲ್ಲಿ 200 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಬಸ್, ರೈಲುಗಳಲ್ಲಿ ನಿಂತು ಪ್ರಯಾಣಕ್ಕೆ ಅನುಮತಿ ಇಲ್ಲ. ಆಸನಕ್ಕೆ ಮಾತ್ರ ಪ್ರಯಾಣಿಕರನ್ನು ಸೀಮಿತಗೊಳಿಸಬೇಕು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಿದೆ.</p>.<p>ಎಲ್ಲ ಕಾರ್ಯಕ್ರಮಗಳನ್ನು ಎರಡು ಗಂಟೆಯೊಳಗೆ ಮುಗಿಸಬೇಕು. ಆಹಾರ ಪೂರೈಕೆ ಪಾರ್ಸೆಲ್ ಆಗಿ ನೀಡಬೇಕು. ರಂಜಾನ್ ಅಂಗವಾಗಿ ಇಫ್ತಾರ್ ಕೂಟಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಮಿತಿ ಮೀರದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ.</p>.<p>ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಸ್ಥಳಗಳನ್ನು ಗುರುತಿಸಿ ಕಂಟೈನ್ಮೆಂಟ್ ವಲಯವಾಗಿ ಘೋಷಿಸಲು ಆಯಾ ಜಿಲ್ಲಾಡಳಿತಕ್ಕೆ ಅನುಮತಿ ನೀಡಲಾಗಿದೆ.</p>.<p class="Briefhead"><strong>ದ.ಕ: 140 ಮಂದಿಗೆ ಕೋವಿಡ್</strong></p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 140 ಮಂದಿಗೆ ಕೋವಿಡ್–19 ದೃಢವಾಗಿದೆ. 97 ಜನರು ಗುಣಮುಖರಾಗಿದ್ದಾರೆ.</p>.<p>ಇದುವರೆಗೆ 6.74 ಲಕ್ಷ ಜನರ ಗಂಟಲು ದ್ರವ ತಪಾಸಣೆ ಮಾಡಲಾಗಿದ್ದು, 6.37 ಲಕ್ಷ ಜನರ ವರದಿ ನೆಗೆಟಿವ್ ಬಂದಿದೆ. ಒಟ್ಟು 37,140 ಜನರಿಗೆ ಕೋವಿಡ್–19 ದೃಢವಾಗಿದ್ದು, 35,245 ಮಂದಿ ಗುಣಮುಖರಾಗಿದ್ದಾರೆ. ಸದ್ಯ 1,152 ಸಕ್ರಿಯ ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>