ಇಲ್ಲಿನ ಪುರಭವನದಲ್ಲಿ ಮಂಗಳವಾರ ನಡೆದ ಚುನಾವಣಾ ಸಿಬ್ಬಂದಿಯ ಪ್ರಥಮ ಹಂತದ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ಯಾವುದೇ ಪಕ್ಷ , ಸಂಬಂಧ ಮರೆತು ಚುನಾವಣಾ ಕೆಲಸವನ್ನು ಕಟ್ಟುನಿಟ್ಟಾಗಿ , ಶಿಸ್ತುಬದ್ಧವಾಗಿ ಮಾಡಬೇಕು. ಉದ್ದೇಶಪೂರ್ವಕವಾಗಿ ಚುನಾವಣಾ ಕಾರ್ಯದಲ್ಲಿ ಹೆಚ್ಚುಕಡಿಮೆ ಮಾಡಿದರೆ ಇಲ್ಲವೇ ನಿರ್ಲಕ್ಷ್ಯದ ಕೆಲಸ ಮಾಡಿದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದರು.