ನವೇನ ಪ್ರಾರ್ಥನೆಯ ಸಮಯದಲ್ಲಿ 9 ವಿವಿಧ ವರ್ಗಗಳ ಜನರಿಗಾಗಿ ಪ್ರಾರ್ಥಿಸಲಾಗುವುದು. ಬೆಳಿಗ್ಗೆ 8 ಗಂಟೆಗೆ ರೋಗಿಗಳಿಗಾಗಿ ಡಾ. ಪಿಯುಸ್ ಡಿಸೋಜ, ಧಾರ್ಮಿಕರಿಗಾಗಿ ಬಲಿಪೂಜೆಯನ್ನು ಅರ್ಪಿಸುವರು. ಸಂಜೆ 4.30ಕ್ಕೆ ಕಲ್ಲಿಕೋಟೆ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ವರ್ಗಿಸ್ ಚಕ್ಕಾಲಕಲ್ ಮಲಯಾಳಂ ಭಾಷೆಯಲ್ಲಿ ಬಲಿಪೂಜೆ ಅರ್ಪಿಸುವರು. ಸಂಜೆ 6 ಗಂಟೆಗೆ ಮಂಗಳೂರು ಧರ್ಮಾಧ್ಯಕ್ಷ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಬಲಿಪೂಜೆ ಅರ್ಪಿಸುವರು ಎಂದರು. ಆಡಳಿತಾಧಿಕಾರಿ ಫಾ. ಪ್ರಾನ್ಸಿಸ್ ಡಿಸೋಜ, ಧರ್ಮಪ್ರಾಂತ್ಯದ ಮಾಧ್ಯಮ ಸಮಿತಿಯ ಕಾರ್ಯದರ್ಶಿ ವಿನ್ಸೆಂಟ್ ಮಸ್ಕರೇನಸ್ ಇದ್ದರು.