ಮೂಡುಬಿದಿರೆಯ ಎಸ್ಬಿಐ ಬ್ಯಾಂಕ್ನಲ್ಲಿರುವ ಖಾತೆಗೆ ಯೋಗೀಶ್ ಆಚಾರ್ಯ ₹52 ಕೋಟಿ ಚೆಕ್ ಹಾಕಿದ್ದು, ನಗದು ವರ್ಗಾವಣೆ ಮಾಡುವ ವೇಳೆಗೆ ಈ ಚೆಕ್ ತಡೆಹಿಡಿಯುವಂತೆ ಆಂಧ್ರ ಎಸಿಬಿಯಿಂದ ಬ್ಯಾಂಕ್ಗೆ ಮಾಹಿತಿ ಬಂದಿತ್ತು. ಕೂಡಲೇ ಆಂಧ್ರ ಎಸಿಬಿ ಮತ್ತು ವಿಶೇಷ ತನಿಖಾ ತಂಡ ಮೂಡುಬಿದಿರೆಗೆ ಬಂದು, ಯೋಗೀಶ್ ಆಚಾರ್ಯನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಯೋಗೀಶ್ ಆಚಾರ್ಯ ನೀಡಿದ ಮಾಹಿತಿ ಮೇರೆಗೆ ಇತರ 5 ಮಂದಿಯನ್ನು ಬಂಧಿಸಲಾಗಿದೆ.