ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು, ಅಕ್ರಮವಾಗಿ ಮಂಗಳೂರು ಪ್ರವೇಶಿಸಿದ ಯಾಕೂಬ್ ಮತ್ತು ಆತನ ಕುಟುಂಬದ ಆರು ಜನರನ್ನು ಬಂಧಿಸಿ, ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿದೆ. ಈತನಿಗೆ ತಲಪಾಡಿಗೆ ಬರಲು ಹಾಗೂ ಗಡಿ ದಾಟಲು ಸಹಾಯ ಮಾಡಿದ ಶಾಕೀರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ತಿಳಿಸಿದ್ದಾರೆ.