<p><strong>ಮಂಗಳೂರು: </strong>ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಇಲ್ಲಿಯವರೆಗೆ ₹10.62 ಕೋಟಿ ವೆಚ್ಚದಲ್ಲಿ ಏಳು ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ನಝೀರ್ ತಿಳಿಸಿದರು.</p>.<p>ಇಲ್ಲಿನ ಪಾಲಿಕೆ ಕಟ್ಟಡದಲ್ಲಿರುವ ಸ್ಮಾರ್ಟ್ಸಿಟಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ₹558.78 ಕೋಟಿ ವೆಚ್ಚದ 26 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.</p>.<p>ನಗರದ ಕ್ಲಾಕ್ ಟವರ್, ನೆಹರೂ ಮೈದಾನ ಸಮೀಪದ ಸ್ಮಾರ್ಟ್ ರಸ್ತೆ, ಪಾನ್ ಸಿಟಿಯಲ್ಲಿ ಸ್ಮಾರ್ಟ್ ಬಸ್ ಸೌಕರ್ಯ ಮತ್ತು ಇ- ಶೌಚಾಲಯ ಮೊದಲ ಹಾಗೂ ಎರಡನೇ ಹಂತ, ಸ್ಮಾರ್ಟ್ ಸಿಟಿ ಕಚೇರಿ ಒಳಾಂಗಣ ವಿನ್ಯಾಸ ಹಾಗೂ ವೆನ್ಲಾಕ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಬ್ಲಾಕ್ನಲ್ಲಿ 37 ಹಾಸಿಗೆಗಳ ಐಸಿಯು, ಸರ್ಕಾರಿ ಕಟ್ಟಡಗಳಲ್ಲಿ ಎಲ್ಇಡಿ ಬಲ್ಬ್ಗಳ ಅಳವಡಿಕೆ ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ತಿಳಿಸಿದರು.</p>.<p>ಈಗಾಗಲೇ ಸ್ಮಾರ್ಟ್ ಸಿಟಿ ಯೋಜನೆಯಡಿ 26 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಇವುಗಳಲ್ಲಿ ಕೆಲವು ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ಇನ್ನು ಸುಮಾರು ₹81 ಕೋಟಿ ವೆಚ್ಚದ ನಾಲ್ಕು ಕಾಮಗಾರಿಗಳು ಟೆಂಡರ್ ಹಂತದಲ್ಲಿವೆ. ₹259.54 ಕೋಟಿ ವೆಚ್ಚದ ಐದು ಕಾಮಗಾರಿಗಳು ಸಮಗ್ರ ಯೋಜನಾ ವರದಿಯ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.</p>.<p>ಸ್ಮಾರ್ಟ್ ಸಿಟಿ ಅಡಿಯಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ₹445 ಕೊಟಿ ವೆಚ್ಚದ ಪಂಪ್ವೆಲ್ ಬಸ್ ನಿಲ್ದಾಣ, ₹79 ಕೋಟಿ ವೆಚ್ಚದ ಹಂಪನಕಟ್ಟೆಯಲ್ಲಿ ಬಹುಮಹಡಿ ಕಾರ್ ಪಾರ್ಕಿಂಗ್, ₹114 ಕೋಟಿ ವೆಚ್ಚದ ಕೇಂದ್ರ ಮಾರುಕಟ್ಟೆ ಪುನರ್ ನಿರ್ಮಾಣ ಸೇರಿದಂತೆ ಒಟ್ಟು ₹707 ಕೋಟಿ ವೆಚ್ಚದ ಐದು ಕಾಮಗಾರಿಗಳು ಸೇರಿವೆ ಎಂದು ಹೇಳಿದರು.</p>.<p>ಮಂಗಳೂರು ಸ್ಮಾರ್ಟ್ಸಿಟಿ ವ್ಯಾಪ್ತಿಯಲ್ಲಿನ ಕಾಮಗಾರಿಗಳು ಹಾಗೂ ಟೆಂಡರ್ಗಳಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಎಲ್ಲ ಯೋಜನೆಗಳು, ಕಾಮಗಾರಿಗಳಿಗೆ ಡಿಪಿಆರ್ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.</p>.<p class="Briefhead">ಪದವೀಧರರಿಗೆ ಇಂಟರ್ನ್ಶಿಪ್</p>.<p>ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಪದವೀಧರರಿಗೆ ‘ದಿ ಅರ್ಬನ್ ಲರ್ನಿಂಗ್ ಇಂಟರ್ನ್ಶಿಪ್’ ಪ್ರೋಗ್ರಾಂ ಯೋಜನೆ ಆರಂಭಿಸಲಾಗುತ್ತಿದೆ. ಈ ಯೋಜನೆಯಡಿ ಸುಮಾರು 300 ಮಂದಿಯನ್ನು ನೇಮಕ ಮಾಡಿಕೊಳ್ಳಲು ಅವಕಾಶವಿದೆ ಎಂದು ಮುಹಮ್ಮದ್ ನಝೀರ್ ಹೇಳಿದರು.</p>.<p>ಈ ಯೋಜನೆಯಲ್ಲಿ ತಾಂತ್ರಿಕ, ವೈದ್ಯಕೀಯ, ನರ್ಸಿಂಗ್, ಸಮಾಜ ಕಾರ್ಯ ಸೇರಿದಂತೆ ಬೇರೆ ಬೇರೆ ವಲಯಗಳಲ್ಲಿ ಅಧ್ಯಯನ ಮಾಡುವವರಿಗೆ ಅವಕಾಶ ಇದೆ. ಅಧಿಕೃತ ಪ್ರಮಾಣಪತ್ರ ದೊರೆಯಲಿದೆ. ಆಸಕ್ತರು www.aicte-india.org ವೆಬ್ಸೈಟ್ ಮೂಲಕ ನೋಂದಣಿ ಮಾಡಬಹುದು ಎಂದರು.</p>.<p>ಪಿಪಿಪಿ ಯೋಜನೆಯಲ್ಲಿ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ಸೌರ ಚಾವಣಿ ಅನುಷ್ಠಾನ ಮಾಡಲಾಗುತ್ತಿದ್ದು, 1,400 ಕಿಲೋ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಇಲ್ಲಿಯವರೆಗೆ ₹10.62 ಕೋಟಿ ವೆಚ್ಚದಲ್ಲಿ ಏಳು ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ನಝೀರ್ ತಿಳಿಸಿದರು.</p>.<p>ಇಲ್ಲಿನ ಪಾಲಿಕೆ ಕಟ್ಟಡದಲ್ಲಿರುವ ಸ್ಮಾರ್ಟ್ಸಿಟಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ₹558.78 ಕೋಟಿ ವೆಚ್ಚದ 26 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.</p>.<p>ನಗರದ ಕ್ಲಾಕ್ ಟವರ್, ನೆಹರೂ ಮೈದಾನ ಸಮೀಪದ ಸ್ಮಾರ್ಟ್ ರಸ್ತೆ, ಪಾನ್ ಸಿಟಿಯಲ್ಲಿ ಸ್ಮಾರ್ಟ್ ಬಸ್ ಸೌಕರ್ಯ ಮತ್ತು ಇ- ಶೌಚಾಲಯ ಮೊದಲ ಹಾಗೂ ಎರಡನೇ ಹಂತ, ಸ್ಮಾರ್ಟ್ ಸಿಟಿ ಕಚೇರಿ ಒಳಾಂಗಣ ವಿನ್ಯಾಸ ಹಾಗೂ ವೆನ್ಲಾಕ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಬ್ಲಾಕ್ನಲ್ಲಿ 37 ಹಾಸಿಗೆಗಳ ಐಸಿಯು, ಸರ್ಕಾರಿ ಕಟ್ಟಡಗಳಲ್ಲಿ ಎಲ್ಇಡಿ ಬಲ್ಬ್ಗಳ ಅಳವಡಿಕೆ ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ತಿಳಿಸಿದರು.</p>.<p>ಈಗಾಗಲೇ ಸ್ಮಾರ್ಟ್ ಸಿಟಿ ಯೋಜನೆಯಡಿ 26 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಇವುಗಳಲ್ಲಿ ಕೆಲವು ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ಇನ್ನು ಸುಮಾರು ₹81 ಕೋಟಿ ವೆಚ್ಚದ ನಾಲ್ಕು ಕಾಮಗಾರಿಗಳು ಟೆಂಡರ್ ಹಂತದಲ್ಲಿವೆ. ₹259.54 ಕೋಟಿ ವೆಚ್ಚದ ಐದು ಕಾಮಗಾರಿಗಳು ಸಮಗ್ರ ಯೋಜನಾ ವರದಿಯ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.</p>.<p>ಸ್ಮಾರ್ಟ್ ಸಿಟಿ ಅಡಿಯಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ₹445 ಕೊಟಿ ವೆಚ್ಚದ ಪಂಪ್ವೆಲ್ ಬಸ್ ನಿಲ್ದಾಣ, ₹79 ಕೋಟಿ ವೆಚ್ಚದ ಹಂಪನಕಟ್ಟೆಯಲ್ಲಿ ಬಹುಮಹಡಿ ಕಾರ್ ಪಾರ್ಕಿಂಗ್, ₹114 ಕೋಟಿ ವೆಚ್ಚದ ಕೇಂದ್ರ ಮಾರುಕಟ್ಟೆ ಪುನರ್ ನಿರ್ಮಾಣ ಸೇರಿದಂತೆ ಒಟ್ಟು ₹707 ಕೋಟಿ ವೆಚ್ಚದ ಐದು ಕಾಮಗಾರಿಗಳು ಸೇರಿವೆ ಎಂದು ಹೇಳಿದರು.</p>.<p>ಮಂಗಳೂರು ಸ್ಮಾರ್ಟ್ಸಿಟಿ ವ್ಯಾಪ್ತಿಯಲ್ಲಿನ ಕಾಮಗಾರಿಗಳು ಹಾಗೂ ಟೆಂಡರ್ಗಳಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಎಲ್ಲ ಯೋಜನೆಗಳು, ಕಾಮಗಾರಿಗಳಿಗೆ ಡಿಪಿಆರ್ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.</p>.<p class="Briefhead">ಪದವೀಧರರಿಗೆ ಇಂಟರ್ನ್ಶಿಪ್</p>.<p>ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಪದವೀಧರರಿಗೆ ‘ದಿ ಅರ್ಬನ್ ಲರ್ನಿಂಗ್ ಇಂಟರ್ನ್ಶಿಪ್’ ಪ್ರೋಗ್ರಾಂ ಯೋಜನೆ ಆರಂಭಿಸಲಾಗುತ್ತಿದೆ. ಈ ಯೋಜನೆಯಡಿ ಸುಮಾರು 300 ಮಂದಿಯನ್ನು ನೇಮಕ ಮಾಡಿಕೊಳ್ಳಲು ಅವಕಾಶವಿದೆ ಎಂದು ಮುಹಮ್ಮದ್ ನಝೀರ್ ಹೇಳಿದರು.</p>.<p>ಈ ಯೋಜನೆಯಲ್ಲಿ ತಾಂತ್ರಿಕ, ವೈದ್ಯಕೀಯ, ನರ್ಸಿಂಗ್, ಸಮಾಜ ಕಾರ್ಯ ಸೇರಿದಂತೆ ಬೇರೆ ಬೇರೆ ವಲಯಗಳಲ್ಲಿ ಅಧ್ಯಯನ ಮಾಡುವವರಿಗೆ ಅವಕಾಶ ಇದೆ. ಅಧಿಕೃತ ಪ್ರಮಾಣಪತ್ರ ದೊರೆಯಲಿದೆ. ಆಸಕ್ತರು www.aicte-india.org ವೆಬ್ಸೈಟ್ ಮೂಲಕ ನೋಂದಣಿ ಮಾಡಬಹುದು ಎಂದರು.</p>.<p>ಪಿಪಿಪಿ ಯೋಜನೆಯಲ್ಲಿ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ಸೌರ ಚಾವಣಿ ಅನುಷ್ಠಾನ ಮಾಡಲಾಗುತ್ತಿದ್ದು, 1,400 ಕಿಲೋ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>