<p><strong>ಬಂಟ್ವಾಳ: </strong>ಕೋವಿಡ್ ಲಾಕ್ಡೌನ್ ವೇಳೆ ವಿಮಾನಯಾನ ರದ್ದುಗೊಂಡು ಭಾರತದಲ್ಲಿ ಉಳಿದುಕೊಂಡಿದ್ದ 73 ಮಂದಿ ಭಾರತೀಯ ಆರೋಗ್ಯ ಕಾರ್ಯಕರ್ತರನ್ನು ದುಬೈ ಆರೋಗ್ಯ ಪ್ರಾಧಿಕಾರ (ಡಿ.ಎಚ್.ಎ.)ದಿಂದ ವಿಶೇಷ ಅನುಮತಿ ಪಡೆದು ಮರಳಿ ಕರೆಸಿಕೊಳ್ಳಲಾಗಿದೆ ಎಂದು ಆಸ್ಟರ್ ಡಿ.ಎಂ ಸಂಸ್ಥೆಯ ಸಹಾಯಕ ವ್ಯವಸ್ಥಾಪಕ ಬಶೀರ್ ಬಂಟ್ವಾಳ ತಿಳಿಸಿದ್ದಾರೆ.</p>.<p>ಕೋವಿಡ್ ಕಾರಣಕ್ಕೆ ಏಪ್ರಿಲ್ 25ರಂದು ಭಾರತ - ಯು.ಎ.ಇ. ನಡುವಿನ ವಿಮಾನಯಾನ ರದ್ದುಗೊಂಡಿತ್ತು. ಇದರಿಂದಾಗಿ ಆಸ್ಟರ್ ಆಸ್ಪತ್ರೆ ಮತ್ತು ಚಿಕಿತ್ಸಾಲಯಗಳ ಸಿಬ್ಬಂದಿ ಯು.ಎ.ಇ.ಗೆ ತೆರಳಲು ಸಾಧ್ಯವಾಗದೆ ಭಾರತದಲ್ಲಿ ಉಳಿದುಕೊಂಡಿದ್ದರು. ಈಗ ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ವೈದ್ಯರು, ದಾದಿಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಒಟ್ಟು 73 ಮಂದಿಯ ಮೊದಲ ತಂಡದವರು<br />ಬುಧವಾರ ಬೆಳಿಗ್ಗೆ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎರಡು ವಿಶೇಷ ಎಮಿರೇಟ್ಸ್ ವಿಮಾನಗಳಲ್ಲಿ ಬಂದಿದ್ದಾರೆ. ಉಳಿದವರನ್ನು ಸಹ ಶೀಘ್ರ ಕರೆತರಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ: </strong>ಕೋವಿಡ್ ಲಾಕ್ಡೌನ್ ವೇಳೆ ವಿಮಾನಯಾನ ರದ್ದುಗೊಂಡು ಭಾರತದಲ್ಲಿ ಉಳಿದುಕೊಂಡಿದ್ದ 73 ಮಂದಿ ಭಾರತೀಯ ಆರೋಗ್ಯ ಕಾರ್ಯಕರ್ತರನ್ನು ದುಬೈ ಆರೋಗ್ಯ ಪ್ರಾಧಿಕಾರ (ಡಿ.ಎಚ್.ಎ.)ದಿಂದ ವಿಶೇಷ ಅನುಮತಿ ಪಡೆದು ಮರಳಿ ಕರೆಸಿಕೊಳ್ಳಲಾಗಿದೆ ಎಂದು ಆಸ್ಟರ್ ಡಿ.ಎಂ ಸಂಸ್ಥೆಯ ಸಹಾಯಕ ವ್ಯವಸ್ಥಾಪಕ ಬಶೀರ್ ಬಂಟ್ವಾಳ ತಿಳಿಸಿದ್ದಾರೆ.</p>.<p>ಕೋವಿಡ್ ಕಾರಣಕ್ಕೆ ಏಪ್ರಿಲ್ 25ರಂದು ಭಾರತ - ಯು.ಎ.ಇ. ನಡುವಿನ ವಿಮಾನಯಾನ ರದ್ದುಗೊಂಡಿತ್ತು. ಇದರಿಂದಾಗಿ ಆಸ್ಟರ್ ಆಸ್ಪತ್ರೆ ಮತ್ತು ಚಿಕಿತ್ಸಾಲಯಗಳ ಸಿಬ್ಬಂದಿ ಯು.ಎ.ಇ.ಗೆ ತೆರಳಲು ಸಾಧ್ಯವಾಗದೆ ಭಾರತದಲ್ಲಿ ಉಳಿದುಕೊಂಡಿದ್ದರು. ಈಗ ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ವೈದ್ಯರು, ದಾದಿಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಒಟ್ಟು 73 ಮಂದಿಯ ಮೊದಲ ತಂಡದವರು<br />ಬುಧವಾರ ಬೆಳಿಗ್ಗೆ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎರಡು ವಿಶೇಷ ಎಮಿರೇಟ್ಸ್ ವಿಮಾನಗಳಲ್ಲಿ ಬಂದಿದ್ದಾರೆ. ಉಳಿದವರನ್ನು ಸಹ ಶೀಘ್ರ ಕರೆತರಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>