ಲಾರಿ ಚಾಲಕ, ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದ ಕಾವಿನಮೂಲೆ ನಿವಾಸಿ ಖಲಂದರ್ ಮತ್ತು ಕಡಬ ತಾಲ್ಲೂಕಿನ ಸವಣೂರು ಗ್ರಾಮದ ಮಾಂತೂರು ನಿವಾಸಿ ಝಕಾರಿಯಾ ಬಂಧಿತ ಆರೋಪಿಗಳು. ತಾಲ್ಲೂಕಿನ ಕಬಕ ಗ್ರಾಮದ ಪೋಳ್ಯದಲ್ಲಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಭಾನುವಾರ ವಾಹನ ತಪಾಸಣೆ ನಡೆಸುತ್ತಿದ್ದ ಪುತ್ತೂರು ನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಜಂಬೂರಾಜ್ ಮಹಾಜನ್ ಮತ್ತು ಸಿಬ್ಬಂದಿ, ಪುತ್ತೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಯನ್ನು ತಡೆದು ತಪಾಸಣೆಗೊಳಿಸಿದ ವೇಳೆ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಅಕ್ಕಿ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ.