ಪಿಂಚಣಿಗೆ ಸಂಬಂಧಿಸಿದಂತೆ ತೊಂದರೆಗಳು ಇದ್ದಲ್ಲಿ, ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆಯ ಪ್ರತಿ, ಹಾಗೂ ಪಿಂಚಣಿ ಮಂಜೂರಾತಿ ಆದೇಶದ ಪ್ರತಿಯನ್ನು ಸಂಬಂಧಪಟ್ಟ ಗ್ರಾಮಕರಣಿಕರಿಗೆ ಅಥವಾ ತಾಲ್ಲೂಕು ಕಚೇರಿಯ ವಿಷಯ ನಿರ್ವಾಹಕರಲ್ಲಿ ನೀಡಬೇಕು. ರಾಷ್ಟ್ರೀಯ ಕುಟುಂಬ ಸಹಾಯಧನ ಯೋಜನೆ, ಅಂತ್ಯಸಂಸ್ಕಾರ ಸಹಾಯಧನ ಯೋಜನೆಗಳಲ್ಲಿ ಅನುದಾನ ಮಂಜೂರಾಗಿರುವ ಪ್ರಕರಣಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.