ಬೆಳ್ತಂಗಡಿ: ತಾಲ್ಲೂಕಿನ ಕೆಲವೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದ್ದು, ಗಾಳಿ ಸಹಿತ ಸಿಡಿಲಿನಿಂದಾಗಿ ಕೆಲವು ಭಾಗಗಳಲ್ಲಿ ಹಾನಿಯೂ ಸಂಭವಿಸಿದೆ.
ತಾಲ್ಲೂಕಿನ ಕೊಯ್ಯೂರು ಗ್ರಾಮದ ಮೈಂದಕೋಡಿ ಲೋಕಯ್ಯ ಗೌಡರ ಮನೆ ಸಮೀಪದ ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಗರಿಗಳ ನಡುವೆ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ತೆಂಗಿನ ಮರ ಹೊತ್ತಿ ಉರಿದಿದೆ.