<p><strong>ಉಳ್ಳಾಲ:</strong> ಮಹಿಳಾಪರ ಚಿಂತನೆಯನ್ನು ಬೆಳೆಸುವ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ ಎಂದು ಜನವಾದಿ ಮಹಿಳಾ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ಜಯಂತಿ ಶೆಟ್ಟಿ ಅಭಿಪ್ರಾಯಪಟ್ಟರು.</p>.<p>ಕುತ್ತಾರಿನ ಮುನ್ನೂರು ಯುವಕ ಮಂಡಲದಲ್ಲಿ ಭಾನುವಾರ ನಡೆದ ಜನವಾದಿ ಮಹಿಳಾ ಸಂಘಟನೆಯ ಉಳ್ಳಾಲ ವಲಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಮಾಜದಲ್ಲಿ ಮಹಿಳೆಯರನ್ನು ಅತ್ಯಂತ ತುಚ್ಛವಾಗಿ ಕಾಣುವ ಪ್ರವ್ರತ್ತಿ ವ್ಯಾಪಕಗೊಳ್ಳುತ್ತಿದೆ. ಪ್ರತಿಗಾಮಿ ಶಕ್ತಿಗಳು ಮಹಿಳೆಯರನ್ನು ನಿಕೃಷ್ಟವಾಗಿ ಕಾಣುತ್ತಿವೆ’ ಎಂದರು.</p>.<p>ಮುಖ್ಯ ಅತಿಥಿಯಾಗಿದ್ದ ಮುಖಂಡರಾದ ಪದ್ಮಾವತಿ ಶೆಟ್ಟಿ ಮಾತನಾಡಿ, ರಾಜಕೀಯದಲ್ಲಿ, ಉದ್ಯೋಗದಲ್ಲಿ ಮಹಿಳಾ ಮೀಸಲಾತಿ ಜಾರಿಯಾಗುತ್ತಿಲ್ಲ. ಸಮಾನ ದುಡಿಮೆಗೆ ಸಮಾನ ವೇತನ ನೀಡುತ್ತಿಲ್ಲ. ಶೈಕ್ಷಣಿಕವಾಗಿ ಮಹಿಳೆಯರ ಪ್ರಮಾಣ ಜಾಸ್ತಿಯಿದ್ದರೂ ಯೋಗ್ಯ ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ ಎಂದರು</p>.<p>ಜೆಎಂಎಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಭಾರತಿ ಬೋಳಾರ, ಮುಖಂಡರಾದ ಪದ್ಮಾವತಿ ಕುತ್ತಾರ್ ಮಾತನಾಡಿದರು. ಅಧ್ಯಕ್ಷತೆಯನ್ನು ಹಿರಿಯ ಮುಖಂಡರಾದ ವಿಲಾಸಿನಿ ತೊಕ್ಕೊಟ್ಟು ವಹಿಸಿದ್ದರು.</p>.<p>ಮಹಿಳಾಪರ ಚಿಂತಕಿ ಅರ್ಚನಾ ರಾಮಚಂದ್ರ, ಪಂಚಾಯಿತಿ ಸದಸಯೆ ರಾಜೇಶ್ವರಿ, ಪ್ರಮುಖರಾದ ಪ್ರೀತಾ ರೋಹಿದಾಸ್, ಪ್ರಮೋದಿನಿ ಭಾಗವಹಿಸಿದ್ದರು.</p>.<p>ಮಹಿಳೆಯರು ಅನುಭವಿಸುವ ಸಂಕಷ್ಟಗಳ ಬಗ್ಗೆ ಗಂಭೀರವಾಗಿ ಚರ್ಚಿಸಿ ಮುಂಬರುವ ದಿನಗಳಲ್ಲಿ ಸದೃಢ ಮಹಿಳಾ ಚಳವಳಿಯನ್ನು ಕಟ್ಟಲು ಸಮ್ಮೇಳನವು ದೃಢ ತೀರ್ಮಾನ ಕೈಗೊಂಡಿತು.</p>.<p>ನೂತನ ತಾಲ್ಲೂಕು ಸಮಿತಿಯನ್ನು ಆಯ್ಕೆಗೊಳಿಸಿತು. ಅಧ್ಯಕ್ಷರಾಗಿ ಮಾಲತಿ ಸುಧೀರ್ ತೊಕ್ಕೋಟು, ಕಾರ್ಯದರ್ಶಿಯಾಗಿ ಪ್ರಮೋದಿನಿ ಕಲ್ಲಾಪು, ಖಜಾಂಚಿಯಾಗಿ ಅರ್ಚನಾ ರಾಮಚಂದ್ರ ಆಯ್ಕೆಯಾದರು.</p>.<p>ಉಪಾಧ್ಯಕ್ಷರಾಗಿ ಪದ್ಮಾವತಿ ಶೆಟ್ಟಿ, ರಾಜೇಶ್ವರಿ, ಶಾಲಿನಿ ಪೂಜಾರಿ, ರತ್ನಮಾಲಾ, ಉಮಾವತಿ, ವಿನೋದಾ ಅಸೈಗೋಳಿ, ಜತೆ ಕಾರ್ಯದರ್ಶಿಗಳಾಗಿ ಪ್ರೀತಾ ರೋಹಿದಾಸ್, ವಿಲಾಸಿನಿ, ಕಮರುನ್ನೀಸಾ, ಗುಣವತಿ, ಗುಲಾಬಿ ಅವರನ್ನು ಆಯ್ಕೆ ಮಾಡಲಾಯಿತು. 16 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ:</strong> ಮಹಿಳಾಪರ ಚಿಂತನೆಯನ್ನು ಬೆಳೆಸುವ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ ಎಂದು ಜನವಾದಿ ಮಹಿಳಾ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ಜಯಂತಿ ಶೆಟ್ಟಿ ಅಭಿಪ್ರಾಯಪಟ್ಟರು.</p>.<p>ಕುತ್ತಾರಿನ ಮುನ್ನೂರು ಯುವಕ ಮಂಡಲದಲ್ಲಿ ಭಾನುವಾರ ನಡೆದ ಜನವಾದಿ ಮಹಿಳಾ ಸಂಘಟನೆಯ ಉಳ್ಳಾಲ ವಲಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಮಾಜದಲ್ಲಿ ಮಹಿಳೆಯರನ್ನು ಅತ್ಯಂತ ತುಚ್ಛವಾಗಿ ಕಾಣುವ ಪ್ರವ್ರತ್ತಿ ವ್ಯಾಪಕಗೊಳ್ಳುತ್ತಿದೆ. ಪ್ರತಿಗಾಮಿ ಶಕ್ತಿಗಳು ಮಹಿಳೆಯರನ್ನು ನಿಕೃಷ್ಟವಾಗಿ ಕಾಣುತ್ತಿವೆ’ ಎಂದರು.</p>.<p>ಮುಖ್ಯ ಅತಿಥಿಯಾಗಿದ್ದ ಮುಖಂಡರಾದ ಪದ್ಮಾವತಿ ಶೆಟ್ಟಿ ಮಾತನಾಡಿ, ರಾಜಕೀಯದಲ್ಲಿ, ಉದ್ಯೋಗದಲ್ಲಿ ಮಹಿಳಾ ಮೀಸಲಾತಿ ಜಾರಿಯಾಗುತ್ತಿಲ್ಲ. ಸಮಾನ ದುಡಿಮೆಗೆ ಸಮಾನ ವೇತನ ನೀಡುತ್ತಿಲ್ಲ. ಶೈಕ್ಷಣಿಕವಾಗಿ ಮಹಿಳೆಯರ ಪ್ರಮಾಣ ಜಾಸ್ತಿಯಿದ್ದರೂ ಯೋಗ್ಯ ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ ಎಂದರು</p>.<p>ಜೆಎಂಎಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಭಾರತಿ ಬೋಳಾರ, ಮುಖಂಡರಾದ ಪದ್ಮಾವತಿ ಕುತ್ತಾರ್ ಮಾತನಾಡಿದರು. ಅಧ್ಯಕ್ಷತೆಯನ್ನು ಹಿರಿಯ ಮುಖಂಡರಾದ ವಿಲಾಸಿನಿ ತೊಕ್ಕೊಟ್ಟು ವಹಿಸಿದ್ದರು.</p>.<p>ಮಹಿಳಾಪರ ಚಿಂತಕಿ ಅರ್ಚನಾ ರಾಮಚಂದ್ರ, ಪಂಚಾಯಿತಿ ಸದಸಯೆ ರಾಜೇಶ್ವರಿ, ಪ್ರಮುಖರಾದ ಪ್ರೀತಾ ರೋಹಿದಾಸ್, ಪ್ರಮೋದಿನಿ ಭಾಗವಹಿಸಿದ್ದರು.</p>.<p>ಮಹಿಳೆಯರು ಅನುಭವಿಸುವ ಸಂಕಷ್ಟಗಳ ಬಗ್ಗೆ ಗಂಭೀರವಾಗಿ ಚರ್ಚಿಸಿ ಮುಂಬರುವ ದಿನಗಳಲ್ಲಿ ಸದೃಢ ಮಹಿಳಾ ಚಳವಳಿಯನ್ನು ಕಟ್ಟಲು ಸಮ್ಮೇಳನವು ದೃಢ ತೀರ್ಮಾನ ಕೈಗೊಂಡಿತು.</p>.<p>ನೂತನ ತಾಲ್ಲೂಕು ಸಮಿತಿಯನ್ನು ಆಯ್ಕೆಗೊಳಿಸಿತು. ಅಧ್ಯಕ್ಷರಾಗಿ ಮಾಲತಿ ಸುಧೀರ್ ತೊಕ್ಕೋಟು, ಕಾರ್ಯದರ್ಶಿಯಾಗಿ ಪ್ರಮೋದಿನಿ ಕಲ್ಲಾಪು, ಖಜಾಂಚಿಯಾಗಿ ಅರ್ಚನಾ ರಾಮಚಂದ್ರ ಆಯ್ಕೆಯಾದರು.</p>.<p>ಉಪಾಧ್ಯಕ್ಷರಾಗಿ ಪದ್ಮಾವತಿ ಶೆಟ್ಟಿ, ರಾಜೇಶ್ವರಿ, ಶಾಲಿನಿ ಪೂಜಾರಿ, ರತ್ನಮಾಲಾ, ಉಮಾವತಿ, ವಿನೋದಾ ಅಸೈಗೋಳಿ, ಜತೆ ಕಾರ್ಯದರ್ಶಿಗಳಾಗಿ ಪ್ರೀತಾ ರೋಹಿದಾಸ್, ವಿಲಾಸಿನಿ, ಕಮರುನ್ನೀಸಾ, ಗುಣವತಿ, ಗುಲಾಬಿ ಅವರನ್ನು ಆಯ್ಕೆ ಮಾಡಲಾಯಿತು. 16 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>