<p><strong>ಉಳ್ಳಾಲ</strong>: ಸೋಮೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಮಹಿಳೆಯೊಬ್ಬರನ್ನು ಜೀವರಕ್ಷಕರೊಬ್ಬರು 1 ಕಿ.ಮಿ. ದೂರದಿಂದ ಓಡಿ ಬಂದು ನೀರಿನಿಂದ ಮೇಲಕ್ಕೆತ್ತಿದರೂ. ಸಕಾಲದಲ್ಲಿ ಆಮ್ಲಜನಕ ಸಿಗದೆ ಆಕೆ ಕೊನೆಯುಸಿರೆಳೆದರು.</p><p>ಸಮುದ್ರದಿಂದ ಮೇಲಕ್ಕೆತ್ತಿದ ಬಳಿಕವೂ ಸುಮಾರು 1 ಗಂಟೆ ಮಹಿಳೆ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದರು. ಆಂಬುಲೆನ್ಸ್ ಸ್ಥಳಕ್ಕೆ ತಲುಪುವಷ್ಟರಲ್ಲಿ ಆಕೆಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು. </p><p>ಸುಮಾರು 50 ವರ್ಷದ ಮಹಿಳೆ ಸೋಮೇಶ್ವರ ಸಮುದ್ರತೀರದಲ್ಲಿ ರುದ್ರಪಾದೆ ಬಳಿ ಸ್ನಾನ ಮಾಡುತ್ತಿದ್ದಾಗ, ಭಾರಿ ಅಲೆಗೆ ಸಿಲುಕಿ ಸಮುದ್ರಪಾಲಾಗಿದ್ದರು. ಸ್ಥಳದಲ್ಲಿದ್ದವರು ಬೊಬ್ಬಿಟ್ಟಿದ್ದರು. ವಿಷಯ ತಿಳಿದು ಜೀವರಕ್ಷಕ ಅಶೋಕ್ ತಕ್ಷಣವೇ 1 ಕಿ.ಮೀ ದೂರದ ಮನೆಯಿಂದ ಓಡಿಕೊಂಡೇ ರುದ್ರಪಾದೆಯತ್ತ ಧಾವಿಸಿದ್ದರು. ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ಸಮುದ್ರ ತೀರಕ್ಕೆ ತಂದಿದ್ದರು. ಅಲ್ಲಿಂದ ಮತ್ತೆ ದೇವಸ್ಥಾನ ಬಳಿ ಒಬ್ಬರೇ ಮೆಟ್ಟಿಲುಗಳನ್ನು ಹತ್ತಿ ಎತ್ತಿಕೊಂಡು ರಸ್ತೆಯವರೆಗೂ ತಂದಿದ್ದರು.</p><p>ಘಟನೆ ನಡೆದ ತಕ್ಷಣವೇ ಉಳ್ಳಾಲ ಠಾಣೆಯ ಪೊಲೀಸರಿಗೆ ಹಾಗೂ ಆಂಬ್ಯುಲೆನ್ಸ್ ಗೆ ಸ್ಥಳೀಯರು ಕರೆ ಮಾಡಿದ್ದರು. ಸ್ಥಳಕ್ಕೆ ಆಂಬ್ಯುಲೆನ್ಸ್ ವಾಹನ ಹಾಗೂ ಪೊಲೀಸರು ತಲುಪುವಾಗ 1 ಗಂಟೆ ವಿಳಂಬವಾಗಿತ್ತು. ಮಹಿಳೆಯ ಗುರುತು ಮತ್ತು ವಿಳಾಸ ತಿಳಿದುಬಂದಿಲ್ಲ.</p><p>ಸೋಮೇಶ್ವರದಲ್ಲಿ ಸಮುದ್ರದ ಕಿನಾರೆಯಲ್ಲಿ ಜೀವರಕ್ಷಣೆ ಮಾಡಬಲ್ಲ ಯುವಕರಿದ್ದಾರೆ. ಆದರೆ, ಜೀವರರಕ್ಷಿಸುವ ಪರಿಕರಗಳಿಲ್ಲ. ಈ ಬಗ್ಗೆ ಜಿಲ್ಲಾಡಳಿತ ತುರ್ತು ಕ್ರಮಕೈಗೊಳ್ಳಬೇಕಾದ ಅವಶ್ಯಕತೆಯಿದೆ ಎಂದು ಸ್ಥಳೀಯರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ</strong>: ಸೋಮೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಮಹಿಳೆಯೊಬ್ಬರನ್ನು ಜೀವರಕ್ಷಕರೊಬ್ಬರು 1 ಕಿ.ಮಿ. ದೂರದಿಂದ ಓಡಿ ಬಂದು ನೀರಿನಿಂದ ಮೇಲಕ್ಕೆತ್ತಿದರೂ. ಸಕಾಲದಲ್ಲಿ ಆಮ್ಲಜನಕ ಸಿಗದೆ ಆಕೆ ಕೊನೆಯುಸಿರೆಳೆದರು.</p><p>ಸಮುದ್ರದಿಂದ ಮೇಲಕ್ಕೆತ್ತಿದ ಬಳಿಕವೂ ಸುಮಾರು 1 ಗಂಟೆ ಮಹಿಳೆ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದರು. ಆಂಬುಲೆನ್ಸ್ ಸ್ಥಳಕ್ಕೆ ತಲುಪುವಷ್ಟರಲ್ಲಿ ಆಕೆಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು. </p><p>ಸುಮಾರು 50 ವರ್ಷದ ಮಹಿಳೆ ಸೋಮೇಶ್ವರ ಸಮುದ್ರತೀರದಲ್ಲಿ ರುದ್ರಪಾದೆ ಬಳಿ ಸ್ನಾನ ಮಾಡುತ್ತಿದ್ದಾಗ, ಭಾರಿ ಅಲೆಗೆ ಸಿಲುಕಿ ಸಮುದ್ರಪಾಲಾಗಿದ್ದರು. ಸ್ಥಳದಲ್ಲಿದ್ದವರು ಬೊಬ್ಬಿಟ್ಟಿದ್ದರು. ವಿಷಯ ತಿಳಿದು ಜೀವರಕ್ಷಕ ಅಶೋಕ್ ತಕ್ಷಣವೇ 1 ಕಿ.ಮೀ ದೂರದ ಮನೆಯಿಂದ ಓಡಿಕೊಂಡೇ ರುದ್ರಪಾದೆಯತ್ತ ಧಾವಿಸಿದ್ದರು. ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ಸಮುದ್ರ ತೀರಕ್ಕೆ ತಂದಿದ್ದರು. ಅಲ್ಲಿಂದ ಮತ್ತೆ ದೇವಸ್ಥಾನ ಬಳಿ ಒಬ್ಬರೇ ಮೆಟ್ಟಿಲುಗಳನ್ನು ಹತ್ತಿ ಎತ್ತಿಕೊಂಡು ರಸ್ತೆಯವರೆಗೂ ತಂದಿದ್ದರು.</p><p>ಘಟನೆ ನಡೆದ ತಕ್ಷಣವೇ ಉಳ್ಳಾಲ ಠಾಣೆಯ ಪೊಲೀಸರಿಗೆ ಹಾಗೂ ಆಂಬ್ಯುಲೆನ್ಸ್ ಗೆ ಸ್ಥಳೀಯರು ಕರೆ ಮಾಡಿದ್ದರು. ಸ್ಥಳಕ್ಕೆ ಆಂಬ್ಯುಲೆನ್ಸ್ ವಾಹನ ಹಾಗೂ ಪೊಲೀಸರು ತಲುಪುವಾಗ 1 ಗಂಟೆ ವಿಳಂಬವಾಗಿತ್ತು. ಮಹಿಳೆಯ ಗುರುತು ಮತ್ತು ವಿಳಾಸ ತಿಳಿದುಬಂದಿಲ್ಲ.</p><p>ಸೋಮೇಶ್ವರದಲ್ಲಿ ಸಮುದ್ರದ ಕಿನಾರೆಯಲ್ಲಿ ಜೀವರಕ್ಷಣೆ ಮಾಡಬಲ್ಲ ಯುವಕರಿದ್ದಾರೆ. ಆದರೆ, ಜೀವರರಕ್ಷಿಸುವ ಪರಿಕರಗಳಿಲ್ಲ. ಈ ಬಗ್ಗೆ ಜಿಲ್ಲಾಡಳಿತ ತುರ್ತು ಕ್ರಮಕೈಗೊಳ್ಳಬೇಕಾದ ಅವಶ್ಯಕತೆಯಿದೆ ಎಂದು ಸ್ಥಳೀಯರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>