ಕೊರೊನಾ ನಿರ್ಮೂಲನೆಗಾಗಿ ನಾವೆಲ್ಲ ವಿಶ್ವದ ಎಲ್ಲ ಜನರೊಂದಿಗೆ ಏಕತೆ, ಸಂಘಟನೆ ಮತ್ತು ಪ್ರಜ್ಞೆಯೊಂದಿಗೆ ಹೋರಾಟ ನಡೆಸುತ್ತಿದ್ದೇವೆ. ಪ್ರಧಾನಿಯವರ ಸಲಹೆಯಂತೆ ಎಲ್ಲರೂ ಭಾನುವಾರ ರಾತ್ರಿ 9 ಗಂಟೆಗೆ ತಮ್ಮ ಮನೆಯಲ್ಲಿ ಜ್ಯೋತಿ ಬೆಳಗಿಸಿ, ಕೊರೊನಾ ನಿರ್ಮೂಲನೆಯೊಂದಿಗೆ ವಿಶ್ವದ ಎಲ್ಲ ಜನರ ನೆಮ್ಮದಿ ಮತ್ತು ಉಜ್ವಲ ಭವಿಷ್ಯದೊಂದಿಗೆ ಸುಖ-ಶಾಂತಿಗಾಗಿ ಪ್ರಾರ್ಥಿಸೋಣ. ಜ್ಯೋತಿಗೆ ಬಡವ-ಬಲ್ಲಿದ, ಮೇಲು-ಕೀಳು ಅಥವಾ ಪ್ರಾದೇಶಿಕ ಭೇದ ಇಲ್ಲ. ಇತರರ ಸಂತೋಷವನ್ನು ನಾವೆಲ್ಲರೂ ಹಂಚಿಕೊಂಡು ಅನುಭವಿಸೋಣ’ ಎಂದು ಹೇಳಿದ್ದಾರೆ.