<p><strong>ಮಂಗಳೂರು</strong>: ‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಸುವಾಗ ಉಪಜಾತಿಗಳಲ್ಲದ ‘ಮನ್ಸ’ ಅಥವಾ ‘ದಿಕ್ಕ’ ಪದಗಳನ್ನು ಸೇರ್ಪಡೆಗೊಳಿಸಬೇಕೆಂಬ ಬೇಡಿಕೆಗೆ ಮನ್ನಣೆ ನೀಡಬಾರದು’ ಎಂದು ಜಿಲ್ಲಾ ಆದಿ ದ್ರಾವಿಡ ಸಮನ್ವಯ ಸಮಿತಿ ಒತ್ತಾಯಿಸಿದೆ.</p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಎಂ. ಸೀನ ಮಾಸ್ತಿಕಟ್ಟೆ ಅವರು, ಈ ಹಿಂದೆ ಸಂವಿಧಾನ ಬದ್ಧವಾಗಿ ನಿಗದಿಪಡಿಸಿರುವ 101 ಉಪಜಾತಿಗಳ ಪಟ್ಟಿಯ ಪ್ರಕಾರವೇ ಒಳ ಮೀಸಲಾತಿ ಒದಗಿಸಬೇಕು. ‘ಮನ್ಸ’ ಅಥವಾ ‘ದಿಕ್ಕ’ ಇವು ತುಳುನಾಡಿನಲ್ಲಿ ಜಾತಿ ನಿಂದಕ ಪದಗಳು. ಯಾವುದೇ ಸರ್ಕಾರಿ ಕಡತಗಳಲ್ಲಿ, ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ದಾಖಲೆಗಳಲ್ಲಿ ಈ ಜಾತಿಗಳ ಉಲ್ಲೇಖವಿಲ್ಲ ಎಂದರು.</p>.<p>ಜಾತಿ ಪಟ್ಟಿಗೆ ಸೇರ್ಪಡೆ ಮಾಡುವ ಅಥವಾ ತೆರವುಗೊಳಿಸುವ ಅಧಿಕಾರವು ಲೋಕಸಭೆ ಮತ್ತು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಇದೆ. ‘ಮನ್ಸ’ ಸಂಘದ ಸಮಿತಿಯ ಅಧ್ಯಕ್ಷರು, ಈ ಸಮುದಾಯವು ಕರಾವಳಿಯಲ್ಲಿ 5 ಲಕ್ಷ ಜನಸಂಖ್ಯೆ ಹೊಂದಿದೆ ಎಂದು ಹೇಳುತ್ತಾರೆ. ಇದನ್ನು ಅವರು ಸಾಬೀತುಪಡಿಸಬೇಕು ಎಂದು ಬಹಿರಂಗ ಸವಾಲು ಹಾಕುತ್ತಿದ್ದೇವೆ. ಇದೇ ರೀತಿ ಗೊಂದಲ ಸೃಷ್ಟಿಸಿದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು. </p>.<p>ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮೇ 28ರಂದು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಲಾಗುವುದು. ಕರಾವಳಿ ಭಾಗದ ಆದಿ ದ್ರಾವಿಡ ಸಮಾಜದವರು ಈ ಜಾತಿ ನಿಂದಕ ಪದಗಳ ಸೇರ್ಪಡೆ ಬೇಡಿಕೆಯ ಬಗ್ಗೆ ಆಕ್ರೋಶ ಗೊಂಡಿದ್ದಾರೆ. ಇದು ಆದಿ ದ್ರಾವಿಡ ಸಮುದಾಯಕ್ಕೆ ಮಾಡುವ ಅನ್ಯಾಯವಾಗಿದೆ ಎಂದರು.</p>.<p>ಸಂಘಟನೆಯ ಎಸ್.ಪಿ. ಆನಂದ, ಜಿನ್ನಪ್ಪ ಬಂಗೇರ, ಸುರೇಶ್ ಬಲ್ಲಾಳ್ಬಾಗ್, ಜಗದೀಶ್ ಪಾಂಡೇಶ್ವರ, ಲಕ್ಷ್ಮಣ, ನವೀನ್ ಬಲ್ಲಾಳ್ಬಾಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಸುವಾಗ ಉಪಜಾತಿಗಳಲ್ಲದ ‘ಮನ್ಸ’ ಅಥವಾ ‘ದಿಕ್ಕ’ ಪದಗಳನ್ನು ಸೇರ್ಪಡೆಗೊಳಿಸಬೇಕೆಂಬ ಬೇಡಿಕೆಗೆ ಮನ್ನಣೆ ನೀಡಬಾರದು’ ಎಂದು ಜಿಲ್ಲಾ ಆದಿ ದ್ರಾವಿಡ ಸಮನ್ವಯ ಸಮಿತಿ ಒತ್ತಾಯಿಸಿದೆ.</p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಎಂ. ಸೀನ ಮಾಸ್ತಿಕಟ್ಟೆ ಅವರು, ಈ ಹಿಂದೆ ಸಂವಿಧಾನ ಬದ್ಧವಾಗಿ ನಿಗದಿಪಡಿಸಿರುವ 101 ಉಪಜಾತಿಗಳ ಪಟ್ಟಿಯ ಪ್ರಕಾರವೇ ಒಳ ಮೀಸಲಾತಿ ಒದಗಿಸಬೇಕು. ‘ಮನ್ಸ’ ಅಥವಾ ‘ದಿಕ್ಕ’ ಇವು ತುಳುನಾಡಿನಲ್ಲಿ ಜಾತಿ ನಿಂದಕ ಪದಗಳು. ಯಾವುದೇ ಸರ್ಕಾರಿ ಕಡತಗಳಲ್ಲಿ, ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ದಾಖಲೆಗಳಲ್ಲಿ ಈ ಜಾತಿಗಳ ಉಲ್ಲೇಖವಿಲ್ಲ ಎಂದರು.</p>.<p>ಜಾತಿ ಪಟ್ಟಿಗೆ ಸೇರ್ಪಡೆ ಮಾಡುವ ಅಥವಾ ತೆರವುಗೊಳಿಸುವ ಅಧಿಕಾರವು ಲೋಕಸಭೆ ಮತ್ತು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಇದೆ. ‘ಮನ್ಸ’ ಸಂಘದ ಸಮಿತಿಯ ಅಧ್ಯಕ್ಷರು, ಈ ಸಮುದಾಯವು ಕರಾವಳಿಯಲ್ಲಿ 5 ಲಕ್ಷ ಜನಸಂಖ್ಯೆ ಹೊಂದಿದೆ ಎಂದು ಹೇಳುತ್ತಾರೆ. ಇದನ್ನು ಅವರು ಸಾಬೀತುಪಡಿಸಬೇಕು ಎಂದು ಬಹಿರಂಗ ಸವಾಲು ಹಾಕುತ್ತಿದ್ದೇವೆ. ಇದೇ ರೀತಿ ಗೊಂದಲ ಸೃಷ್ಟಿಸಿದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು. </p>.<p>ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮೇ 28ರಂದು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಲಾಗುವುದು. ಕರಾವಳಿ ಭಾಗದ ಆದಿ ದ್ರಾವಿಡ ಸಮಾಜದವರು ಈ ಜಾತಿ ನಿಂದಕ ಪದಗಳ ಸೇರ್ಪಡೆ ಬೇಡಿಕೆಯ ಬಗ್ಗೆ ಆಕ್ರೋಶ ಗೊಂಡಿದ್ದಾರೆ. ಇದು ಆದಿ ದ್ರಾವಿಡ ಸಮುದಾಯಕ್ಕೆ ಮಾಡುವ ಅನ್ಯಾಯವಾಗಿದೆ ಎಂದರು.</p>.<p>ಸಂಘಟನೆಯ ಎಸ್.ಪಿ. ಆನಂದ, ಜಿನ್ನಪ್ಪ ಬಂಗೇರ, ಸುರೇಶ್ ಬಲ್ಲಾಳ್ಬಾಗ್, ಜಗದೀಶ್ ಪಾಂಡೇಶ್ವರ, ಲಕ್ಷ್ಮಣ, ನವೀನ್ ಬಲ್ಲಾಳ್ಬಾಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>