ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಾಹಿತನ ವಿರುದ್ಧ ಅಪಹರಣ ದೂರು

Last Updated 10 ಜುಲೈ 2021, 11:05 IST
ಅಕ್ಷರ ಗಾತ್ರ

ಬೆಳ್ತಂಗಡಿ: ಒಂಬತ್ತು ತಿಂಗಳುಗಳ ಹಿಂದೆ ವಿವಾಹವಾಗಿದ್ದ ವ್ಯಕ್ತಿಯೊಬ್ಬ, ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು, ಆಕೆಯ ಸಹೋದರಿಯನ್ನು ಕರೆದುಕೊಂಡು ಹೋಗಿದ್ದಾನೆ. ಈ ಸಂಬಂಧ ಮಹಿಳೆಯ ತಂದೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಾಲ್ಲೂಕಿನ ಕನ್ಯಾಡಿ ಗ್ರಾಮದ ಕೈಕಂಬ ಸಮೀಪದ ನಿವಾಸಿ ಮುಹಮ್ಮದ್ ಅವರ ಪುತ್ರಿಯನ್ನು ಮುಸ್ತಫಾ ಎಂಬ ವ್ಯಕ್ತಿಗೆ ಮದುವೆ ಮಾಡಿಕೊಡಲಾಗಿತ್ತು. ಪತಿ–ಪತ್ನಿಯ ನಡುವೆ ಮನಸ್ತಾಪ ಉಂಟಾಗಿ, ಪತ್ನಿ ತವರು ಮನೆಗೆ ಬಂದು ಉಳಿದಿದ್ದಳು. ಗುರುವಾರ ತಾಯಿಯೊಂದಿಗೆ ಮಾವನ ಮನೆಗೆ ಬಂದ ಮುಸ್ತಫಾ, ನಾದಿನಿಯನ್ನು ಕರೆದುಕೊಂಡು ಹೋಗಿದ್ದು, ಕಿರಿಯ ಪುತ್ರಿ ಮನೆಗೆ ಬಂದಿಲ್ಲವೆಂದು ತಂದೆ ಮುಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT