<p><strong>ಮಂಗಳೂರು</strong>: ಬಂಟ್ವಾಳ ತಾಲ್ಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಈಚೆಗೆ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿದೆ.</p>.<p>ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಬೆಟ್ಟಗೆರೆ ಗ್ರಾಮದ ನಿವಾಸಿ ರವಿ ಸಂಜಯ್ (29) ಬಂಧಿತ ಆರೋಪಿ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಅವರನ್ನು ಇರಾಕೋಡಿಯಲ್ಲಿ ಮೇ 27ರಂದು ಹತ್ಯೆ ಮಾಡಲಾಗಿತ್ತು. ಅವರ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. </p>.<p class="Subhead">ಭರತ್ ಕುಮ್ಡೇಲು ಮನೆ ಶೋಧ: ಈ ಹತ್ಯೆ ಪ್ರಕರಣದ ಆರೋಪಿಯಾಗಿರುವ ಬಂಟ್ವಾಳ ಪುದು ಗ್ರಾಮದ ಭರತ್ ಕುಮ್ಡೇಲು ಎಂಬಾತನ ಮನೆಯನ್ನು ಪೊಲೀಸರು ನ್ಯಾಯಾಲಯದಿಂದ ವಾರಂಟ್ ಪಡೆದು ಶೋಧ ನಡೆಸಿದ್ದಾರೆ. ಈ ಘಟನೆ ನಡೆದಂದಿನಿಂದ ಆರೋಪಿ ಭರತ್ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಭರತ್ ಕುಮ್ಡೇಲು ಬಜರಂಗ ದಳದ ‘ಪುತ್ತೂರು ಜಿಲ್ಲಾ ಘಟಕ’ದ ಸಂಚಾಲಕ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಬಂಟ್ವಾಳ ತಾಲ್ಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಈಚೆಗೆ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿದೆ.</p>.<p>ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಬೆಟ್ಟಗೆರೆ ಗ್ರಾಮದ ನಿವಾಸಿ ರವಿ ಸಂಜಯ್ (29) ಬಂಧಿತ ಆರೋಪಿ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಅವರನ್ನು ಇರಾಕೋಡಿಯಲ್ಲಿ ಮೇ 27ರಂದು ಹತ್ಯೆ ಮಾಡಲಾಗಿತ್ತು. ಅವರ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. </p>.<p class="Subhead">ಭರತ್ ಕುಮ್ಡೇಲು ಮನೆ ಶೋಧ: ಈ ಹತ್ಯೆ ಪ್ರಕರಣದ ಆರೋಪಿಯಾಗಿರುವ ಬಂಟ್ವಾಳ ಪುದು ಗ್ರಾಮದ ಭರತ್ ಕುಮ್ಡೇಲು ಎಂಬಾತನ ಮನೆಯನ್ನು ಪೊಲೀಸರು ನ್ಯಾಯಾಲಯದಿಂದ ವಾರಂಟ್ ಪಡೆದು ಶೋಧ ನಡೆಸಿದ್ದಾರೆ. ಈ ಘಟನೆ ನಡೆದಂದಿನಿಂದ ಆರೋಪಿ ಭರತ್ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಭರತ್ ಕುಮ್ಡೇಲು ಬಜರಂಗ ದಳದ ‘ಪುತ್ತೂರು ಜಿಲ್ಲಾ ಘಟಕ’ದ ಸಂಚಾಲಕ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>