<p><strong>ಮಂಗಳೂರು:</strong> ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಯ ಮೌಲ್ಯಮಾಪನವನ್ನು ತಕ್ಷಣವೇ ನಡೆಸಿ ಫಲಿತಾಂಶ ಪ್ರಕಟಿಸುವಂತೆ ಎಬಿವಿಪಿ ವತಿಯಿಂದ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.</p>.<p>ಕ್ಲಿಷ್ಟ ಪರಿಸ್ಥಿತಿಗಳ ನಡುವೆಯೂ ಮಂಗಳೂರು ವಿಶ್ವವಿದ್ಯಾಲಯ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನು ಯಶಸ್ವಿಯಾಗಿ ಮುಗಿಸಿದೆ. ಈಗಾಗಲೇ ಶೈಕ್ಷಣಿಕ ವರ್ಷವೂ ಆರು ತಿಂಗಳು ತಡವಾಗಿದ್ದು, ಈಗ ಮುಗಿದಿರುವ ಎಲ್ಲ ಸೆಮಿಸ್ಟರ್ಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿ ಕೂಡಲೇ ಫಲಿತಾಂಶ ಪ್ರಕಟಿಸಬೇಕು ಎಂದು ಒತ್ತಾಯಿಸಿದೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳಿಗೆ ಅವಕಾಶವಿಲ್ಲ. ಉತ್ತರ ಪತ್ರಿಕೆಗಳನ್ನು ಈಗಾಗಲೇ ಮೌಲ್ಯಮಾಪನ ಕೊಠಡಿಯಲ್ಲಿ ಇರಿಸಲಾಗಿದೆ. 2 ಮತ್ತು 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಬಡ್ತಿ ನೀಡಲು 1 ಮತ್ತು 3ನೇ ಸೆಮಿಸ್ಟರ್ನ ಫಲಿತಾಂಶವನ್ನು ಪ್ರಕಟಿಸಲೇಬೇಕಾದ ಅಗತ್ಯವಿದೆ ಎಂದು ತಿಳಿಸಿದೆ.</p>.<p>ಪರೀಕ್ಷೆಯ ಫಲಿತಾಂಶ ವಿಳಂಬವಾದಲ್ಲಿ ವಿದ್ಯಾರ್ಥಿಗಳಲ್ಲಿ ಆತಂಕ ಉಂಟಾಗುವ ಸಾಧ್ಯತೆ ಇದೆ. ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರ ಊಹಾಪೋಹಗಳಿಗೆ ಕಾರಣವಾಗಬಹುದು. ಐಐಟಿ, ಐಐಎಂ ಹಾಗೂ ಐಐಎಸ್ಸಿಯಂತಹ ಶಿಕ್ಷಣ ಸಂಸ್ಥೆಗಳಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಲು ಐದನೇ ಸೆಮಿಸ್ಟರ್ನ ಅಂಕಪಟ್ಟಿ ಕಡ್ಡಾಯವಾಗಿದೆ ಎಂದು ಹೇಳಿದೆ.</p>.<p>ಈ ಸೆಮಿಸ್ಟರ್ ಮೌಲ್ಯಮಾಪನ ಪ್ರಕ್ರಿಯೆ ಬೇಗ ಮುಗಿದರೆ, ಮುಂದಿನ ಶೈಕ್ಷಣಿಕ ವರ್ಷವನ್ನು ಪ್ರಾರಂಭಿಸಲು ಸುಲಭವಾಗುತ್ತದೆ. ಕೂಡಲೇ 1, 3, 5 ನೇ ಸೆಮಿಸ್ಟರ್ನ ತರಗತಿಗಳನ್ನು ಆರಂಭಿಸಿ, ಎಲ್ಲ ಸೆಮಿಸ್ಟರ್ನ ಅಂಕಪಟ್ಟಿಗಳನ್ನು ವಿತರಿಸಲು ಸುಲಭವಾಗುತ್ತದೆ. ವಿಶ್ವವಿದ್ಯಾಲಯ ಮತ್ತು ವಿದ್ಯಾರ್ಥಿಗಳು 2, 4 ಮತ್ತು 6ನೇ ಸೆಮಿಸ್ಟರ್ ಬಗ್ಗೆ ಗಮನ ಹರಿಸಲು ಇದರಿಂದ ಅನುಕೂಲ ಆಗಲಿದೆ ಎಂದು ತಿಳಿಸಿದೆ.</p>.<p>6 ನೇ ಸೆಮಿಸ್ಟರ್ನ ಪರೀಕ್ಷೆಯ ನಂತರ 1, 3 ಮತ್ತು 5 ನೇ ಸೆಮಿಸ್ಟರ್ನ ಮೌಲ್ಯಮಾಪನ ಮಾಡುವ ಯೋಜನೆ ಮಾಡದೇ, ಈ ಕೂಡಲೇ ಮೌಲ್ಯಮಾಪನ ಮಾಡಬೇಕು. ಫಲಿತಾಂಶವನ್ನು ನೀಡಬೇಕು ಎಂದು ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಯ ಮೌಲ್ಯಮಾಪನವನ್ನು ತಕ್ಷಣವೇ ನಡೆಸಿ ಫಲಿತಾಂಶ ಪ್ರಕಟಿಸುವಂತೆ ಎಬಿವಿಪಿ ವತಿಯಿಂದ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.</p>.<p>ಕ್ಲಿಷ್ಟ ಪರಿಸ್ಥಿತಿಗಳ ನಡುವೆಯೂ ಮಂಗಳೂರು ವಿಶ್ವವಿದ್ಯಾಲಯ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನು ಯಶಸ್ವಿಯಾಗಿ ಮುಗಿಸಿದೆ. ಈಗಾಗಲೇ ಶೈಕ್ಷಣಿಕ ವರ್ಷವೂ ಆರು ತಿಂಗಳು ತಡವಾಗಿದ್ದು, ಈಗ ಮುಗಿದಿರುವ ಎಲ್ಲ ಸೆಮಿಸ್ಟರ್ಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿ ಕೂಡಲೇ ಫಲಿತಾಂಶ ಪ್ರಕಟಿಸಬೇಕು ಎಂದು ಒತ್ತಾಯಿಸಿದೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳಿಗೆ ಅವಕಾಶವಿಲ್ಲ. ಉತ್ತರ ಪತ್ರಿಕೆಗಳನ್ನು ಈಗಾಗಲೇ ಮೌಲ್ಯಮಾಪನ ಕೊಠಡಿಯಲ್ಲಿ ಇರಿಸಲಾಗಿದೆ. 2 ಮತ್ತು 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಬಡ್ತಿ ನೀಡಲು 1 ಮತ್ತು 3ನೇ ಸೆಮಿಸ್ಟರ್ನ ಫಲಿತಾಂಶವನ್ನು ಪ್ರಕಟಿಸಲೇಬೇಕಾದ ಅಗತ್ಯವಿದೆ ಎಂದು ತಿಳಿಸಿದೆ.</p>.<p>ಪರೀಕ್ಷೆಯ ಫಲಿತಾಂಶ ವಿಳಂಬವಾದಲ್ಲಿ ವಿದ್ಯಾರ್ಥಿಗಳಲ್ಲಿ ಆತಂಕ ಉಂಟಾಗುವ ಸಾಧ್ಯತೆ ಇದೆ. ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರ ಊಹಾಪೋಹಗಳಿಗೆ ಕಾರಣವಾಗಬಹುದು. ಐಐಟಿ, ಐಐಎಂ ಹಾಗೂ ಐಐಎಸ್ಸಿಯಂತಹ ಶಿಕ್ಷಣ ಸಂಸ್ಥೆಗಳಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಲು ಐದನೇ ಸೆಮಿಸ್ಟರ್ನ ಅಂಕಪಟ್ಟಿ ಕಡ್ಡಾಯವಾಗಿದೆ ಎಂದು ಹೇಳಿದೆ.</p>.<p>ಈ ಸೆಮಿಸ್ಟರ್ ಮೌಲ್ಯಮಾಪನ ಪ್ರಕ್ರಿಯೆ ಬೇಗ ಮುಗಿದರೆ, ಮುಂದಿನ ಶೈಕ್ಷಣಿಕ ವರ್ಷವನ್ನು ಪ್ರಾರಂಭಿಸಲು ಸುಲಭವಾಗುತ್ತದೆ. ಕೂಡಲೇ 1, 3, 5 ನೇ ಸೆಮಿಸ್ಟರ್ನ ತರಗತಿಗಳನ್ನು ಆರಂಭಿಸಿ, ಎಲ್ಲ ಸೆಮಿಸ್ಟರ್ನ ಅಂಕಪಟ್ಟಿಗಳನ್ನು ವಿತರಿಸಲು ಸುಲಭವಾಗುತ್ತದೆ. ವಿಶ್ವವಿದ್ಯಾಲಯ ಮತ್ತು ವಿದ್ಯಾರ್ಥಿಗಳು 2, 4 ಮತ್ತು 6ನೇ ಸೆಮಿಸ್ಟರ್ ಬಗ್ಗೆ ಗಮನ ಹರಿಸಲು ಇದರಿಂದ ಅನುಕೂಲ ಆಗಲಿದೆ ಎಂದು ತಿಳಿಸಿದೆ.</p>.<p>6 ನೇ ಸೆಮಿಸ್ಟರ್ನ ಪರೀಕ್ಷೆಯ ನಂತರ 1, 3 ಮತ್ತು 5 ನೇ ಸೆಮಿಸ್ಟರ್ನ ಮೌಲ್ಯಮಾಪನ ಮಾಡುವ ಯೋಜನೆ ಮಾಡದೇ, ಈ ಕೂಡಲೇ ಮೌಲ್ಯಮಾಪನ ಮಾಡಬೇಕು. ಫಲಿತಾಂಶವನ್ನು ನೀಡಬೇಕು ಎಂದು ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>