ಉದ್ಘಾಟನಾ ಸಮಾರಂಭಕ್ಕೆ ಡಾ. ಕೆ. ಕಸ್ತೂರಿ ರಂಗನ್ ಅವರನ್ನು ಕರೆತರಲು ಪ್ರಕ್ರಿಯೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳು, ಅಧ್ಯಾಪಕರು, ಶಿಕ್ಷಣ ತಜ್ಞರು, ಶೈಕ್ಷಣಿಕ ಆಡಳಿತಗಾರರು ಸಮ್ಮೇಳನದಲ್ಲಿ ಪಾಲ್ಗೊಂಡು, ಶೈಕ್ಷಣಿಕ-ಸಾಮಾಜಿಕ ಸಮಸ್ಯೆ, ಸವಾಲುಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.