ಈ ಸಂಬಂಧ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಕಿಶೋರ್ಕುಮಾರ್ ಹಾಗೂ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್. ಧರ್ಮ ಅವರಿಗೆ ಮನವಿ ನೀಡಿದ ಎಬಿವಿಪಿ ಪ್ರಮುಖರು, ‘1,3 ಮತ್ತು 5ನೇ ಸೆಮಿಸ್ಟರ್ನ ಕೆಲವು ಪರೀಕ್ಷೆಗಳು ಬಾಕಿ ಇದ್ದು, ಅವುಗಳನ್ನು ಕಾಲೇಜು ಪ್ರಾರಂಭವಾದ ತಕ್ಷಣ ನಡೆಸಿ, ತುರ್ತಾಗಿ ಫಲಿತಾಂಶ ನೀಡಬೇಕು. ಪರೀಕ್ಷೆ ವೇಳಾಪಟ್ಟಿಯಿಂದ ವಿದ್ಯಾರ್ಥಿಗಳ ಮೇಲೆ ಯಾವುದೇ ಮಾನಸಿಕ ಒತ್ತಡವ ಉಂಟು ಮಾಡಬಾರದು. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿನ ಕಾಲೇಜುವಾರು ನಡೆಯುತ್ತಿರುವ ಲಸಿಕೆ ಅಭಿಯಾನವನ್ನು ವಿಶ್ವವಿದ್ಯಾಲಯ ಗಮನಿಸಬೇಕು. ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶ ಶೇ 100 ಬರುವುದರಿಂದ ವಿವಿ ವ್ಯಾಪ್ತಿಯಲ್ಲಿ ಯಾವುದೇ ತೊಂದರೆ ಇಲ್ಲದೆ, ವಿದ್ಯಾರ್ಥಿಗಳಿಗೆ ಸೀಟು ಲಭ್ಯವಾಗಲು ಕ್ರಮವಹಿಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕುರಿತು ಗಂಭೀರ ಚಿಂತನೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.