ಕಾಸರಗೋಡು ಜಿಲ್ಲೆಯ ಬಳ್ಳೂರು ನಿವಾಸಿ ಮಹಮ್ಮದ್ ರಫೀಕ್ ಮೃತಪಟ್ಟ ಲಾರಿ ಚಾಲಕ. ಪುಣಚ ಸಮೀಪ ಇರುವ ಕ್ವಾರಿಯಿಂದ ಜಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ಟಿಪ್ಪರ್ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಉರುಳಿ ಬಿದ್ದಿದೆ. ಚಾಲಕ ಟಿಪ್ಪರ್ ಕೆಳಗಡೆ ಹಲವು ಸಮಯಗಳ ವರೆಗೆ ಸಿಕ್ಕಿಹಾಕಿಕೊಂಡಿದ್ದು, ಬಳಿಕ ಮೃತಪಟ್ಟಿದ್ದಾರೆ. ಬಳಿಕ ಸ್ಥಳೀಯರ ಸಹಕಾರದಲ್ಲಿ ಮೃತದೇಹ ಮೇಲೆತ್ತಲಾಯಿತು. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.