<p><strong>ಪುತ್ತೂರು</strong>: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭಾನುವಾರ ನಡೆದ ಅಪಘಾತದಲ್ಲಿ ಸವಾರ ತಂದೆ, ಸಹಸವಾರ ಪುತ್ರ ಮೃತಪಟ್ಟಿದ್ದಾರೆ.</p>.<p>ಪುತ್ತೂರು ನಗರದ ಹೊರವಲಯದ ಕಬಕ ಸಮೀಪದ ಕೂವೆತ್ತಿಲ ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಅವಘಡ ನಡೆದಿದೆ.</p>.<p>ಬಂಟ್ವಾಳ ತಾಲ್ಲೂಕಿನ ನರಿಕೊಂಬು ಸಮೀಪದ ನಾಯಿಲ ಬೋರುಗುಡ್ಡೆ ನಿವಾಸಿ, ನರಿಕೊಂಬು ಗ್ರಾಪಂ ಸದಸ್ಯ, ಸಮಾಜ ಸೇವಾ ಬ್ಯಾಂಕ್ ನಿರ್ದೇಶಕ ಅರುಣ್ ಕುಲಾಲ್ (45), ಅವರ ಪುತ್ರ, ಪ್ರಥಮ ಪಿಯುಸಿಗೆ ದಾಖಲಾಗಿದ್ದ ಧ್ಯಾನ್ (15) ಮೃತಪಟ್ಟವರು.</p>.<p>ಸುಳ್ಯದಲ್ಲಿ ನಡೆಯಲಿದ್ದ ಸಂಬಂಧಿಕರೊಬ್ಬರ ವಿವಾಹ ಸಮಾರಂಭಕ್ಕೆ ತೆರಳುವಾಗ ಅವಘಡ ನಡೆದಿದೆ.</p>.<p>ಅರುಣ್ ಕುಲಾಲ್ ಅವರು ಮಾಣಿ ಕಡೆಯಿಂದ ಸುಳ್ಯಕಡೆಗೆ ಚಲಾಯಿಸುತ್ತಿದ್ದ ಬೈಕ್ಗೆ ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿದೆ. ಅರುಣ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಧ್ಯಾನ್ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟರು.</p>.<p>ಪುತ್ತೂರು ಸಂಚಾರ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ಅರುಣ್ ಕುಲಾಲ್ ಅವರಿಗೆ ಪತ್ನಿ ಜಯಮಾಲಿನಿ, ಪುತ್ರ, 8ನೇ ತರಗತಿ ವಿದ್ಯಾರ್ಥಿ ಪುತ್ರ ರೋಶನ್, ಸಹೋದರ ಗಣೇಶ್ ಕುಲಾಲ್, ಇಬ್ಬರು ಸಹೋದರಿಯರು ಇದ್ದಾರೆ. ಬಡಗಿ ವೃತ್ತಿ ನಡೆಸುತ್ತಿದ್ದ ಅರುಣ್ ಅವರು ಬಿಜೆಪಿ ಕಾರ್ಯಕರ್ತರಾಗಿದ್ದರು.</p>.<p>ಅವಘಡದ ಬಳಿಕ ವಾಹನ ದಟ್ಟಣೆ ಉಂಟಾಗಿ ಇಲಾಖಾ ವಾಹನದಲ್ಲಿ ತಲುಪಲು ಸಾಧ್ಯವಾಗದೆ ಕಬಕದ ಸಮೀಪದಿಂದ ಓಡಿಕೊಂಡು ಬಂದ ಪುತ್ತೂರು ಸಂಚಾರ ಠಾಣೆಯ ಉದಯರವಿ ಅವರು ವಾಹನ ಸಂಚಾರ ನಿಯಂತ್ರಿಸಿದರು. ಇದೇ ರಸ್ತೆಯಾಗಿ ಬಂದ ಮಂಗಳೂರಿನ ಐಜಿ ಅವರೂ ವಾಹನ ದಟ್ಟಣೆಯಲ್ಲಿ ಸಿಲುಕಿಕೊಂಡರು.</p>.<p>ಸಂಸದ ಕ್ಯಾ.ಬ್ರಿಜೇಶ್ ಚೌಟ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭಾನುವಾರ ನಡೆದ ಅಪಘಾತದಲ್ಲಿ ಸವಾರ ತಂದೆ, ಸಹಸವಾರ ಪುತ್ರ ಮೃತಪಟ್ಟಿದ್ದಾರೆ.</p>.<p>ಪುತ್ತೂರು ನಗರದ ಹೊರವಲಯದ ಕಬಕ ಸಮೀಪದ ಕೂವೆತ್ತಿಲ ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಅವಘಡ ನಡೆದಿದೆ.</p>.<p>ಬಂಟ್ವಾಳ ತಾಲ್ಲೂಕಿನ ನರಿಕೊಂಬು ಸಮೀಪದ ನಾಯಿಲ ಬೋರುಗುಡ್ಡೆ ನಿವಾಸಿ, ನರಿಕೊಂಬು ಗ್ರಾಪಂ ಸದಸ್ಯ, ಸಮಾಜ ಸೇವಾ ಬ್ಯಾಂಕ್ ನಿರ್ದೇಶಕ ಅರುಣ್ ಕುಲಾಲ್ (45), ಅವರ ಪುತ್ರ, ಪ್ರಥಮ ಪಿಯುಸಿಗೆ ದಾಖಲಾಗಿದ್ದ ಧ್ಯಾನ್ (15) ಮೃತಪಟ್ಟವರು.</p>.<p>ಸುಳ್ಯದಲ್ಲಿ ನಡೆಯಲಿದ್ದ ಸಂಬಂಧಿಕರೊಬ್ಬರ ವಿವಾಹ ಸಮಾರಂಭಕ್ಕೆ ತೆರಳುವಾಗ ಅವಘಡ ನಡೆದಿದೆ.</p>.<p>ಅರುಣ್ ಕುಲಾಲ್ ಅವರು ಮಾಣಿ ಕಡೆಯಿಂದ ಸುಳ್ಯಕಡೆಗೆ ಚಲಾಯಿಸುತ್ತಿದ್ದ ಬೈಕ್ಗೆ ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿದೆ. ಅರುಣ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಧ್ಯಾನ್ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟರು.</p>.<p>ಪುತ್ತೂರು ಸಂಚಾರ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ಅರುಣ್ ಕುಲಾಲ್ ಅವರಿಗೆ ಪತ್ನಿ ಜಯಮಾಲಿನಿ, ಪುತ್ರ, 8ನೇ ತರಗತಿ ವಿದ್ಯಾರ್ಥಿ ಪುತ್ರ ರೋಶನ್, ಸಹೋದರ ಗಣೇಶ್ ಕುಲಾಲ್, ಇಬ್ಬರು ಸಹೋದರಿಯರು ಇದ್ದಾರೆ. ಬಡಗಿ ವೃತ್ತಿ ನಡೆಸುತ್ತಿದ್ದ ಅರುಣ್ ಅವರು ಬಿಜೆಪಿ ಕಾರ್ಯಕರ್ತರಾಗಿದ್ದರು.</p>.<p>ಅವಘಡದ ಬಳಿಕ ವಾಹನ ದಟ್ಟಣೆ ಉಂಟಾಗಿ ಇಲಾಖಾ ವಾಹನದಲ್ಲಿ ತಲುಪಲು ಸಾಧ್ಯವಾಗದೆ ಕಬಕದ ಸಮೀಪದಿಂದ ಓಡಿಕೊಂಡು ಬಂದ ಪುತ್ತೂರು ಸಂಚಾರ ಠಾಣೆಯ ಉದಯರವಿ ಅವರು ವಾಹನ ಸಂಚಾರ ನಿಯಂತ್ರಿಸಿದರು. ಇದೇ ರಸ್ತೆಯಾಗಿ ಬಂದ ಮಂಗಳೂರಿನ ಐಜಿ ಅವರೂ ವಾಹನ ದಟ್ಟಣೆಯಲ್ಲಿ ಸಿಲುಕಿಕೊಂಡರು.</p>.<p>ಸಂಸದ ಕ್ಯಾ.ಬ್ರಿಜೇಶ್ ಚೌಟ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>