ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಪುತ್ತೂರಿನ ನವವಿವಾಹಿತೆ ಸಾವು

Last Updated 4 ಏಪ್ರಿಲ್ 2021, 3:19 IST
ಅಕ್ಷರ ಗಾತ್ರ

ಪುತ್ತೂರು: ಬೆಂಗಳೂರಿನ ನೆಲಮಂಗಲದ ಬಳಿ ಶನಿವಾರ ಬೆಳಿಗ್ಗೆ ನಡೆದ ಅಪಘಾತದಲ್ಲಿ ಪುತ್ತೂರಿನ ನವ ವಿವಾಹಿತೆ ಮೃತಪಟ್ಟಿದ್ದಾರೆ.

ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಗೋಪಿಕ್ ಅವರ ಪತ್ನಿ ಧನುಷಾ (23) ಮೃತರು.

ಕೋಳಿ ಸಾಗಾಟದ ಲಾರಿ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಧನುಷಾ ಮೃತಪಟ್ಟರೆ, ಇನ್ನೂ ಮೂರು ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಗೋಪಿಕ್ ಹಾಗೂ ಧನುಷಾ ಅವರ ವಿವಾಹ ಫೆ.21ರಂದು ಗುರುವಾಯನಕೆರೆಯ ಬಂಟರ ಭವನದಲ್ಲಿ ಜರುಗಿತ್ತು. ನವ ದಂಪತಿ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೊರಟಿದ್ದರು.

ಕಾರು ಮಂಗಳೂರು– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ಸಮೀಪಿಸುತ್ತಿ ದ್ದಂತೆ ಕೋಳಿ ಸಾಗಾಟದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಗೋಪಿಕ್ ಅವರ ಪತ್ನಿ ಧನುಷಾ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಗೋಪಿಕ್‌, ರೂಪಾ ವೇಣುಗೋಪಾಲ್ ಹಾಗೂ ಶುಭಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ಬು ಆಸ್ಪತ್ರೆಗೆ ದಾಖಲಿಸಲಾಗಿದೆ.

ಧನುಷಾ ಬೆಳ್ತಂಗಡಿ ಗೇರುಕಟ್ಟೆ ಕುಂಟಿನಿ ನಿವಾಸಿ ರೂಪಾ ಮತ್ತು ಪದ್ಮನಾಭ ಶೆಟ್ಟಿ ದಂಪತಿಯ ಪುತ್ರಿ. ಗೋಪಿಕ್‌ ಅವರು ದಾರಂದಕುಕ್ಕು ಸವಿತಾ ಮತ್ತು ಉದಯ ಕುಮಾರ್ ನಾಯ್ಕ್ ಅವರ ಪುತ್ರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT