ಕಾಲೇಜಿಗೆ ಹೋಗಲು ಸುರತ್ಕಲ್ನಲ್ಲಿರುವ ಪಿ.ಜಿ.ಯಿಂದ ಹೊರಟು ನಟರಾಜ್ ಟಾಕೀಸ್ ಬಳಿಯ ಬಸ್ ನಿಲ್ದಾಣದ ಬಳಿ ಹೆದ್ದಾರಿ ದಾಟಲು ಯತ್ನಿಸಿದ ವೇಳೆ ‘ಒನ್ವೇ’ಯಲ್ಲಿ ಬಂದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿದ್ಯಾರ್ಥಿನಿಯರ ತಲೆ, ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಸುತ್ತಮುತ್ತಲಿನ ಅಂಗಡಿಯವರು, ಬಾಡಿಗೆ ವಾಹನದ ಚಾಲಕರು ಅವರನ್ನು ಆಸ್ಪತ್ರೆಗೆ ಸೇರಿಸಿದರು. ಇಬ್ಬರೂ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರು ಉತ್ತರ ಸಂಚಾರ ಠಾಣಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.