‘ಪ್ರಜಾವಾಣಿ’ ಜತೆ ಮಾತನಾಡಿದ ಲಿಖಿತ್ ರೈ, ‘ಆಡಳಿತ ವ್ಯವಸ್ಥೆಯ ಲೋಪದಿಂದಾಗಿ ನಾನು ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ಹೋದ ಪ್ರಾಣವನ್ನು ಮತ್ತೆ ತರಲು ಸಾಧ್ಯವಿಲ್ಲ. ಆದರೆ, ಇನ್ನಾದರೂ ಆಡಳಿತ ನಡೆಸುವವರು ಎಚ್ಚೆತ್ತುಕೊಂಡು ಲೋಪಗಳನ್ನು ಸರಿಪಡಿಸಬೇಕು. ಇಂತಹ ಪರಿಸ್ಥಿತಿ ಇನ್ನು ಯಾರಿಗೂ ಬರಬಾರದು ಎಂಬ ಉದ್ದೇಶದಿಂದ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸಿದ್ದೇನೆ’ ಎಂದು ಹೇಳಿದರು.