<p><strong>ಉಪ್ಪಿನಂಗಡಿ: </strong>ಇಲ್ಲಿನ ಗಾಂಧಿಪಾರ್ಕ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರ ಬುಲೆಟ್ ಟ್ಯಾಂಕರ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ನ ಸಹಸವಾರ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆತನ ತಾಯಿ ಗಂಭೀರ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಉಪ್ಪಿನಂಗಡಿ ಸೇಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಅಧ್ವಿತ್ (15) ಮೃತ ಬಾಲಕ. ಈತ ಕರಾಯ ಗ್ರಾಮದ ಕಲ್ಲೇರಿ ನಿವಾಸಿ ರಿಕ್ಷಾ ಚಾಲಕ ಜನಾರ್ದನ ಹಾಗೂ ಉಜ್ರುಬೆಟ್ಟು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಅನುರಾಧಾ ಅವರ ಪುತ್ರ.</p>.<p>ಎಸ್ಸೆಸ್ಸೆಲ್ಸಿ ಕಲಿಯುತ್ತಿರುವ ಅಧ್ವಿತ್ ತರಗತಿ ಪರೀಕ್ಷೆಯ ಪುಸ್ತಕವನ್ನು ಶಾಲೆಗೆ ಕೊಡುವ ಸಲುವಾಗಿ ತಾಯಿ ಜತೆ ಸ್ಕೂಟರ್ನಲ್ಲಿ ಹೋಗಿದ್ದರು. ಶಾಲೆಯಲ್ಲಿ ಪುಸ್ತಕ ಕೊಟ್ಟು ಬರುವಾಗ ಈ ಅವಘಡ ಸಂಭವಿಸಿದೆ.</p>.<p><strong>ವಾಹನ ಸಂಚಾರಕ್ಕೆ ಅಡಚಣೆ: </strong>2 ದಿನಗಳ ವಾರಾಂತ್ಯ ಕರ್ಫ್ಯೂ ಬಳಿಕ ಸೋಮವಾರ ಬೆಳಿಗ್ಗಿನಿಂದಲೇ ಪೇಟೆಯಲ್ಲಿ, ಹೆದ್ದಾರಿಯಲ್ಲಿ ವಾಹನಗಳ ಓಡಾಟ ಹೆಚ್ಚಿತ್ತು. ಅಪಘಾತ ಸಂಭವಿಸಿದ ತಕ್ಷಣ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಗಿ, ಸುಮಾರು 1 ತಾಸು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಉಪ್ಪಿನಂಗಡಿ ಮತ್ತು ಪುತ್ತೂರು ಸಂಚಾರ ಪೊಲೀಸರು ಸ್ಥಳಕ್ಕೆ ಬಂದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p><strong>ಅಪಘಾತ ವಲಯ: </strong>ಗಾಂಧಿ ಪಾರ್ಕ್ನಿಂದ ಪೆಟ್ರೋಲ್ ಬಂಕ್ ತನಕವೂ ರಸ್ತೆ ಇಳಿಜಾರು ಇದ್ದು, ವಾಹನಗಳು ವೇಗವಾಗಿ ಬರುತ್ತಿರುತ್ತದೆ. ಅಪಘಾತ ನಡೆದ ಸ್ಥಳದಲ್ಲಿ ನಿರಂತರ ಅಪಘಾತ ನಡೆಯುತ್ತಿದ್ದು, ಈಗಾಗಲೇ ಐದಕ್ಕೂ ಅಧಿಕ ಸಾವು ಸಂಭವಿಸಿದೆ. ಹತ್ತಾರು ಮಂದಿ ಗಾಯಗೊಂಡಿರುತ್ತಾರೆ. ಹೀಗಾಗಿ, ಈ ಜಾಗ ಅಪಘಾತ ವಲಯ ಎಂದೇ ಗುರುತಿಸಲ್ಪಟ್ಟಿದೆ.</p>.<p><strong>ರಸ್ತೆ ಉಬ್ಬು ನಿರ್ಮಿಸಲು ಆಗ್ರಹ:</strong> ಇಲ್ಲಿ ಅಪಘಾತವನ್ನು ತಡೆಗಟ್ಟುವ ಸಲುವಾಗಿ 7 ವರ್ಷಗಳ ಹಿಂದೆ ಸ್ಥಳೀಯ ಸಂಘ ಸಂಸ್ಥೆ ಮತ್ತು ದಾಣಿಗಳ ಸಹಕಾರ ಪಡೆದುಕೊಂಡು ಬ್ಯಾರಿಕೇಡ್ ಹಾಕಲಾಗಿತ್ತು. ಆದರೆ, ಅದು ಕೆಲವು ಸಮಯ ಮಾತ್ರ ಇದ್ದು, ಬಳಿಕ ಮಾಯವಾಗಿರುತ್ತದೆ. ಆದ್ದರಿಂದ ಈ ಜಾಗದಲ್ಲಿ ರಸ್ತೆ ಉಬ್ಬು ನಿರ್ಮಾಣ ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ: </strong>ಇಲ್ಲಿನ ಗಾಂಧಿಪಾರ್ಕ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರ ಬುಲೆಟ್ ಟ್ಯಾಂಕರ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ನ ಸಹಸವಾರ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆತನ ತಾಯಿ ಗಂಭೀರ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಉಪ್ಪಿನಂಗಡಿ ಸೇಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಅಧ್ವಿತ್ (15) ಮೃತ ಬಾಲಕ. ಈತ ಕರಾಯ ಗ್ರಾಮದ ಕಲ್ಲೇರಿ ನಿವಾಸಿ ರಿಕ್ಷಾ ಚಾಲಕ ಜನಾರ್ದನ ಹಾಗೂ ಉಜ್ರುಬೆಟ್ಟು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಅನುರಾಧಾ ಅವರ ಪುತ್ರ.</p>.<p>ಎಸ್ಸೆಸ್ಸೆಲ್ಸಿ ಕಲಿಯುತ್ತಿರುವ ಅಧ್ವಿತ್ ತರಗತಿ ಪರೀಕ್ಷೆಯ ಪುಸ್ತಕವನ್ನು ಶಾಲೆಗೆ ಕೊಡುವ ಸಲುವಾಗಿ ತಾಯಿ ಜತೆ ಸ್ಕೂಟರ್ನಲ್ಲಿ ಹೋಗಿದ್ದರು. ಶಾಲೆಯಲ್ಲಿ ಪುಸ್ತಕ ಕೊಟ್ಟು ಬರುವಾಗ ಈ ಅವಘಡ ಸಂಭವಿಸಿದೆ.</p>.<p><strong>ವಾಹನ ಸಂಚಾರಕ್ಕೆ ಅಡಚಣೆ: </strong>2 ದಿನಗಳ ವಾರಾಂತ್ಯ ಕರ್ಫ್ಯೂ ಬಳಿಕ ಸೋಮವಾರ ಬೆಳಿಗ್ಗಿನಿಂದಲೇ ಪೇಟೆಯಲ್ಲಿ, ಹೆದ್ದಾರಿಯಲ್ಲಿ ವಾಹನಗಳ ಓಡಾಟ ಹೆಚ್ಚಿತ್ತು. ಅಪಘಾತ ಸಂಭವಿಸಿದ ತಕ್ಷಣ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಗಿ, ಸುಮಾರು 1 ತಾಸು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಉಪ್ಪಿನಂಗಡಿ ಮತ್ತು ಪುತ್ತೂರು ಸಂಚಾರ ಪೊಲೀಸರು ಸ್ಥಳಕ್ಕೆ ಬಂದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p><strong>ಅಪಘಾತ ವಲಯ: </strong>ಗಾಂಧಿ ಪಾರ್ಕ್ನಿಂದ ಪೆಟ್ರೋಲ್ ಬಂಕ್ ತನಕವೂ ರಸ್ತೆ ಇಳಿಜಾರು ಇದ್ದು, ವಾಹನಗಳು ವೇಗವಾಗಿ ಬರುತ್ತಿರುತ್ತದೆ. ಅಪಘಾತ ನಡೆದ ಸ್ಥಳದಲ್ಲಿ ನಿರಂತರ ಅಪಘಾತ ನಡೆಯುತ್ತಿದ್ದು, ಈಗಾಗಲೇ ಐದಕ್ಕೂ ಅಧಿಕ ಸಾವು ಸಂಭವಿಸಿದೆ. ಹತ್ತಾರು ಮಂದಿ ಗಾಯಗೊಂಡಿರುತ್ತಾರೆ. ಹೀಗಾಗಿ, ಈ ಜಾಗ ಅಪಘಾತ ವಲಯ ಎಂದೇ ಗುರುತಿಸಲ್ಪಟ್ಟಿದೆ.</p>.<p><strong>ರಸ್ತೆ ಉಬ್ಬು ನಿರ್ಮಿಸಲು ಆಗ್ರಹ:</strong> ಇಲ್ಲಿ ಅಪಘಾತವನ್ನು ತಡೆಗಟ್ಟುವ ಸಲುವಾಗಿ 7 ವರ್ಷಗಳ ಹಿಂದೆ ಸ್ಥಳೀಯ ಸಂಘ ಸಂಸ್ಥೆ ಮತ್ತು ದಾಣಿಗಳ ಸಹಕಾರ ಪಡೆದುಕೊಂಡು ಬ್ಯಾರಿಕೇಡ್ ಹಾಕಲಾಗಿತ್ತು. ಆದರೆ, ಅದು ಕೆಲವು ಸಮಯ ಮಾತ್ರ ಇದ್ದು, ಬಳಿಕ ಮಾಯವಾಗಿರುತ್ತದೆ. ಆದ್ದರಿಂದ ಈ ಜಾಗದಲ್ಲಿ ರಸ್ತೆ ಉಬ್ಬು ನಿರ್ಮಾಣ ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>