ಆರೋಪಿಯ ಪತ್ತೆಗಾಗಿ ನೇಮಕವಾಗಿದ್ದ ಪುತ್ತೂರು ನಗರ ಠಾಣೆಯ ಹೆಡ್ ಕಾನ್ಸ್ಟೆಬಲ್ ಪರಮೇಶ್ವರ ಅವರು ಆರೋಪಿ ವಾಸ್ತವ್ಯ ಇರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ನಗರ ಠಾಣೆಯ ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ಮತ್ತು ಎಸ್ಐಗಳಾದ ರಾಜೇಶ್ ಹಾಗೂ ನಸ್ರೀನ್ ತಾಜ್ ಚಟ್ಟರಕಿ ಅವರ ಮಾರ್ಗದರ್ಶನದಂತೆ ಪರಮೇಶ್ವರ, ಜಗದೀಶ್ ಮತ್ತು ಕೇಶವ ಅವರು ಆರೋಪಿಯನ್ನು ತಮಿಳುನಾಡಿನಲ್ಲಿ ಮೇ 28ರಂದು ರಾತ್ರಿ ಬಂಧಿಸಿ, ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.