ಈತನು “ಕನಕ” ಎಂಬ ವಾಟ್ಸ್ಅಪ್ ಗ್ರೂಪ್ ನ ಅಡ್ಮಿನ್ ಆಗಿದ್ದು, ಈ ಗ್ರೂಪ್ ನಲ್ಲಿ ಸರ್ಕಾರಿ ಅಧಿಕಾರಿಗಳನ್ನು, ರಾಜಕೀಯ ವ್ಯಕ್ತಿಗಳು, ಮಾಧ್ಯಮದವರನ್ನು ಸೇರಿಸಿಕೊಂಡಿದ್ದ. ನಂತರ ತನ್ನ ವಾಟ್ಸಪ್ ಗ್ರೂಪ್ನ ಹೆಸರನ್ನು ನಮೂದಿಸಿ, ಕರೆ ಮಾಡಿ ತನ್ನ ಪರಿಚಯವನ್ನು ಮಾಡಿಕೊಳ್ಳುತ್ತಿದ್ದ. ಆ ಪರಿಚಯವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕರನ್ನು ನಂಬಿಸಿ ಹಣವನ್ನು ಸುಲಿಗೆ ಮಾಡುತ್ತಿದ್ದ. ಈತನ ವಿರುದ್ದ ಈ ಹಿಂದೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ಕೂಡಾ ಇದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ತಿಳಿಸಿದ್ದಾರೆ.