‘ವಿದ್ಯಾರ್ಥಿನಿಯ ತಾಯಿ ವಿನಂತಿ ಪತ್ರ ನೀಡಿ ಮಗಳಿಗೆ ಸಮೀಪದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಿನಂತಿಸಿದ್ದರು. ಈ ವಿಷಯವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ಎಸ್. ರಮ್ಯಾ ಅವರಿಗೆ ತಿಳಿಸಿದಾಗ ಅವರು, ಸಮೀಪದ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ಸೂಚನೆ ನೀಡಿದ್ದರು. ಅದರಂತೆ, ಪದುವಾ ಕೇಂದ್ರದಲ್ಲಿ ವಿದ್ಯಾರ್ಥಿನಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಒದಗಿಸಲಾಗಿತ್ತು. ಗುರುವಾರ ಮತ್ತು ಶುಕ್ರವಾರ ಸಂತ್ರಸ್ತ ವಿದ್ಯಾರ್ಥಿನಿ ಆಂಬುಲೆನ್ಸ್ನಲ್ಲಿ ಬಂದು ಪರೀಕ್ಷೆ ಬರೆದಿದ್ದಾರೆ. ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆಗೊಳಿಸಲಾಗಿತ್ತು’ ಎಂದು ಡಿಡಿಪಿಯು ಸಿ.ಡಿ. ಜಯಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.