‘ಆ್ಯಸಿಡ್ ದಾಳಿಯ ಮುಖ್ಯ ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿದ್ದುಕೊಂಡೇ ಪರೀಕ್ಷೆ ಸಿದ್ಧತೆ ನಡೆಸಿರುವ ಅವರು ಏ.19ರಂದು ನಡೆದ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು. ವಿಶೇಷ ಅನುಮತಿ ಮೇರೆಗೆ ಅವರಿಗೆ ಆಸ್ಪತ್ರೆ ಸಮೀಪ ಇರುವ ಪರೀಕ್ಷಾ ಕೇಂದ್ರಕ್ಕೆ ಬರಲು ಆಂಬುಲೆನ್ಸ್ ವ್ಯವಸ್ಥೆಗೊಳಿಸಲಾಗಿತ್ತು. ಆದರೆ, ಅವರಿಗೆ ದ್ವಿತೀಯ ಪಿಯು ಮಂಡಳಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಶಸ್ತ್ರಚಿಕಿತ್ಸೆ ಇರುವ ಕಾರಣಕ್ಕೆ ಈ ಬಾರಿ ಪರೀಕ್ಷೆ ಬರೆಯಲು ಆಗದು ಎಂದು ವಿದ್ಯಾರ್ಥಿನಿಯರ ಪಾಲಕರು ತಿಳಿಸಿದ್ದಾರೆ. ಪಿಯು–3ನೇ ಪರೀಕ್ಷೆಗೆ ಅವರು ಹಾಜರಾಗಬಹುದು’ ಎಂದು ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.