<p><strong>ಮಂಗಳೂರು: </strong>ಇಲ್ಲಿನ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದ್ದು, 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು ನವೆಂಬರ್ 15ರೊಳಗೆ ಅದಾನಿ ಸಮೂಹ ಸಂಸ್ಥೆ ವಹಿಸಿಕೊಳ್ಳಬೇಕಿದೆ.</p>.<p>ಅಗತ್ಯವಿರುವ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ನವೆಂಬರ್ 1ರಿಂದಲೇ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆಗೆ ನೀಡುವ ಸಾಧ್ಯತೆ ಇದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಮೂಲಗಳು ತಿಳಿಸಿವೆ.</p>.<p>ಮಂಗಳೂರು ವಿಮಾನ ನಿಲ್ದಾಣದ ಕಾರ್ಯಾಚರಣೆ ಬಗ್ಗೆ ಅದಾನಿ ಸಂಸ್ಥೆ ಹಲವು ತಿಂಗಳಿನಿಂದ ಅಧ್ಯಯನ ನಡೆಸಿದೆ. ನಿಲ್ದಾಣದ ನಿರ್ದೇಶಕ ಹುದ್ದೆ ಕೆಲವು ತಿಂಗಳು ಮಾತ್ರ ಇರಲಿದ್ದು, ಬಳಿಕ ಅದಾನಿ ಸಂಸ್ಥೆ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳಲು ಸಿಇಒ ನೇಮಕ ಮಾಡಲಿದೆ.</p>.<p>ಅದಾನಿ ಸಂಸ್ಥೆ ಮತ್ತು ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರಗಳು ಜಂಟಿಯಾಗಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಲಿವೆ. ಹೂಡಿಕೆ, ಟರ್ಮಿನಲ್ ಕಟ್ಟಡದ ವಾಣಿಜ್ಯ ಚಟುವಟಿಕೆ, ಲಾಭ-ನಷ್ಟದ ವ್ಯವಹಾರ, ವಿಮಾನಯಾನ ಸಂಸ್ಥೆಗಳು ನೀಡುವ ಬಾಡಿಗೆಯಂತಹ ವಿಷಯಗಳನ್ನು ಅದಾನಿ ಸಂಸ್ಥೆ ನೋಡಿಕೊಳ್ಳಲಿದೆ. ವಿಮಾನಗಳ ಆಗಮನ, ನಿರ್ಗಮನವನ್ನು ವಿಮಾನ ನಿಲ್ದಾಣ ಪ್ರಾಧಿಕಾರ ನೋಡಿಕೊಳ್ಳಲಿದ್ದು, ಅದಾನಿ ಸಂಸ್ಥೆಗೆ ಮಾರ್ಗದರ್ಶನ ನೀಡಲಿದೆ.</p>.<p>ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆ ಆರಂಭಿಸಿದರೂ, ಈಗಿರುವ ಉದ್ಯೋಗಿಗಳು ಹಿಂದಿನಂತೆಯೇ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಒಂದು ವರ್ಷಗಳ ಬಳಿಕ ಸಂಸ್ಥೆ ಹೊಸ ನೇಮಕಾತಿಯನ್ನು ಮಾಡಿಕೊಳ್ಳಲಿದೆ ಎಂದು ಅದಾನಿ ಸಮೂಹದ ಮೂಲಗಳು ತಿಳಿಸಿವೆ.</p>.<p><strong>ದರ ಪರಿಷ್ಕರಣೆ ಸಾಧ್ಯತೆ:</strong> ವಿಮಾನ ನಿಲ್ದಾಣದ ವಾಣಿಜ್ಯ ಚಟುವಟಿಕೆಗಳು ಅದಾನಿ ಸಂಸ್ಥೆ ಪಾಲಾದ ನಂತದ ಟರ್ಮಿನಲ್ ಕಟ್ಟಡದ ಬಾಡಿಗೆ ಪರಿಷ್ಕರಣೆ ಆಗುವ ನಿರೀಕ್ಷೆ ಇದೆ. ಪ್ರತ್ಯೇಕ ಏರ್ಪೋರ್ಟ್ ಕಾಂಪ್ಲೆಕ್ಸ್, ಮಾಲ್ ನಿರ್ಮಾಣವಾಗಲಿವೆ. ಅದಾನಿ ಸಂಸ್ಥೆ ನಿಲ್ದಾಣದ ಅಭಿವೃದ್ಧಿಗಾಗಿ ಹೂಡಿಕೆ ಮಾಡಲಿದೆ.</p>.<p>ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ವಿಮಾನ ನಿಲ್ದಾಣಗಳನ್ನು ನಿರ್ವಹಣೆ ಮಾಡಲಾಗುತ್ತದೆ. 2018ರಲ್ಲಿ ಇದಕ್ಕಾಗಿ ಟೆಂಡರ್ ಆಹ್ವಾನಿಸಲಾಗಿತ್ತು. 2019ರ ಜುಲೈನಲ್ಲಿ ಕೇಂದ್ರ ಸರ್ಕಾರ ಅದಾನಿ ಸಂಸ್ಥೆಗೆ 50 ವರ್ಷಗಳ ಕಾಲ ನಿರ್ವಹಣೆಗೆ ಗುತ್ತಿಗೆ ನೀಡಿ ಆದೇಶ ಹೊರಡಿಸಿತ್ತು.</p>.<p class="Briefhead"><strong>ಮಂಗಳೂರು– ಮೈಸೂರು ವಿಮಾನ</strong></p>.<p>ಮಂಗಳೂರಿನಿಂದ ಮೈಸೂರಿಗೆ ಇದೇ 25ರಿಂದ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ತೀರ್ಮಾನಿಸಿದೆ.</p>.<p>25ರಿಂದ ಮಂಗಳೂರು-ಮೈಸೂರು ನಡುವೆ ಪ್ರಾಯೋಗಿಕವಾಗಿ ವಿಮಾನ ಸಂಚಾರ ಆರಂಭವಾಗಲಿದ್ದು, ಕಾರ್ಯಸಾಧ್ಯತಾ ವರದಿಯನ್ನು ಆಧರಿಸಿ ವಿಮಾನ ಸೇವೆಯನ್ನು ಮುಂದುವರಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ.</p>.<p>ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ವಿಮಾನ ಮೈಸೂರು ಮಾರ್ಗವಾಗಿ ಹಾರಾಟ ನಡೆಸಲಿದೆ. ಬೆಂಗಳೂರಿನಿಂದ ಬೆಳಿಗ್ಗೆ 6.50ಕ್ಕೆ ಹೊರಡುವ ವಿಮಾನ ಮೈಸೂರು ತಲುಪಲಿದ್ದು, 7.55ಕ್ಕೆ ಮೈಸೂರಿನಿಂದ ಹೊರಟು 8.50ಕ್ಕೆ ಮಂಗಳೂರು ತಲುಪುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಇಲ್ಲಿನ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದ್ದು, 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು ನವೆಂಬರ್ 15ರೊಳಗೆ ಅದಾನಿ ಸಮೂಹ ಸಂಸ್ಥೆ ವಹಿಸಿಕೊಳ್ಳಬೇಕಿದೆ.</p>.<p>ಅಗತ್ಯವಿರುವ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ನವೆಂಬರ್ 1ರಿಂದಲೇ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆಗೆ ನೀಡುವ ಸಾಧ್ಯತೆ ಇದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಮೂಲಗಳು ತಿಳಿಸಿವೆ.</p>.<p>ಮಂಗಳೂರು ವಿಮಾನ ನಿಲ್ದಾಣದ ಕಾರ್ಯಾಚರಣೆ ಬಗ್ಗೆ ಅದಾನಿ ಸಂಸ್ಥೆ ಹಲವು ತಿಂಗಳಿನಿಂದ ಅಧ್ಯಯನ ನಡೆಸಿದೆ. ನಿಲ್ದಾಣದ ನಿರ್ದೇಶಕ ಹುದ್ದೆ ಕೆಲವು ತಿಂಗಳು ಮಾತ್ರ ಇರಲಿದ್ದು, ಬಳಿಕ ಅದಾನಿ ಸಂಸ್ಥೆ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳಲು ಸಿಇಒ ನೇಮಕ ಮಾಡಲಿದೆ.</p>.<p>ಅದಾನಿ ಸಂಸ್ಥೆ ಮತ್ತು ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರಗಳು ಜಂಟಿಯಾಗಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಲಿವೆ. ಹೂಡಿಕೆ, ಟರ್ಮಿನಲ್ ಕಟ್ಟಡದ ವಾಣಿಜ್ಯ ಚಟುವಟಿಕೆ, ಲಾಭ-ನಷ್ಟದ ವ್ಯವಹಾರ, ವಿಮಾನಯಾನ ಸಂಸ್ಥೆಗಳು ನೀಡುವ ಬಾಡಿಗೆಯಂತಹ ವಿಷಯಗಳನ್ನು ಅದಾನಿ ಸಂಸ್ಥೆ ನೋಡಿಕೊಳ್ಳಲಿದೆ. ವಿಮಾನಗಳ ಆಗಮನ, ನಿರ್ಗಮನವನ್ನು ವಿಮಾನ ನಿಲ್ದಾಣ ಪ್ರಾಧಿಕಾರ ನೋಡಿಕೊಳ್ಳಲಿದ್ದು, ಅದಾನಿ ಸಂಸ್ಥೆಗೆ ಮಾರ್ಗದರ್ಶನ ನೀಡಲಿದೆ.</p>.<p>ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಸಂಸ್ಥೆ ಆರಂಭಿಸಿದರೂ, ಈಗಿರುವ ಉದ್ಯೋಗಿಗಳು ಹಿಂದಿನಂತೆಯೇ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಒಂದು ವರ್ಷಗಳ ಬಳಿಕ ಸಂಸ್ಥೆ ಹೊಸ ನೇಮಕಾತಿಯನ್ನು ಮಾಡಿಕೊಳ್ಳಲಿದೆ ಎಂದು ಅದಾನಿ ಸಮೂಹದ ಮೂಲಗಳು ತಿಳಿಸಿವೆ.</p>.<p><strong>ದರ ಪರಿಷ್ಕರಣೆ ಸಾಧ್ಯತೆ:</strong> ವಿಮಾನ ನಿಲ್ದಾಣದ ವಾಣಿಜ್ಯ ಚಟುವಟಿಕೆಗಳು ಅದಾನಿ ಸಂಸ್ಥೆ ಪಾಲಾದ ನಂತದ ಟರ್ಮಿನಲ್ ಕಟ್ಟಡದ ಬಾಡಿಗೆ ಪರಿಷ್ಕರಣೆ ಆಗುವ ನಿರೀಕ್ಷೆ ಇದೆ. ಪ್ರತ್ಯೇಕ ಏರ್ಪೋರ್ಟ್ ಕಾಂಪ್ಲೆಕ್ಸ್, ಮಾಲ್ ನಿರ್ಮಾಣವಾಗಲಿವೆ. ಅದಾನಿ ಸಂಸ್ಥೆ ನಿಲ್ದಾಣದ ಅಭಿವೃದ್ಧಿಗಾಗಿ ಹೂಡಿಕೆ ಮಾಡಲಿದೆ.</p>.<p>ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ವಿಮಾನ ನಿಲ್ದಾಣಗಳನ್ನು ನಿರ್ವಹಣೆ ಮಾಡಲಾಗುತ್ತದೆ. 2018ರಲ್ಲಿ ಇದಕ್ಕಾಗಿ ಟೆಂಡರ್ ಆಹ್ವಾನಿಸಲಾಗಿತ್ತು. 2019ರ ಜುಲೈನಲ್ಲಿ ಕೇಂದ್ರ ಸರ್ಕಾರ ಅದಾನಿ ಸಂಸ್ಥೆಗೆ 50 ವರ್ಷಗಳ ಕಾಲ ನಿರ್ವಹಣೆಗೆ ಗುತ್ತಿಗೆ ನೀಡಿ ಆದೇಶ ಹೊರಡಿಸಿತ್ತು.</p>.<p class="Briefhead"><strong>ಮಂಗಳೂರು– ಮೈಸೂರು ವಿಮಾನ</strong></p>.<p>ಮಂಗಳೂರಿನಿಂದ ಮೈಸೂರಿಗೆ ಇದೇ 25ರಿಂದ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ತೀರ್ಮಾನಿಸಿದೆ.</p>.<p>25ರಿಂದ ಮಂಗಳೂರು-ಮೈಸೂರು ನಡುವೆ ಪ್ರಾಯೋಗಿಕವಾಗಿ ವಿಮಾನ ಸಂಚಾರ ಆರಂಭವಾಗಲಿದ್ದು, ಕಾರ್ಯಸಾಧ್ಯತಾ ವರದಿಯನ್ನು ಆಧರಿಸಿ ವಿಮಾನ ಸೇವೆಯನ್ನು ಮುಂದುವರಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ.</p>.<p>ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ವಿಮಾನ ಮೈಸೂರು ಮಾರ್ಗವಾಗಿ ಹಾರಾಟ ನಡೆಸಲಿದೆ. ಬೆಂಗಳೂರಿನಿಂದ ಬೆಳಿಗ್ಗೆ 6.50ಕ್ಕೆ ಹೊರಡುವ ವಿಮಾನ ಮೈಸೂರು ತಲುಪಲಿದ್ದು, 7.55ಕ್ಕೆ ಮೈಸೂರಿನಿಂದ ಹೊರಟು 8.50ಕ್ಕೆ ಮಂಗಳೂರು ತಲುಪುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>