ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತುಳು ಭಾಷಿಕ ಆದಿದ್ರಾವಿಡ ಸಮುದಾಯವು ಆದಿದ್ರಾವಿಡ, ಆದಿ ಕರ್ನಾಟಕ, ಹೊಲೆಯ, ಪಾಲೆ, ಕರಾದಿ, ಕಲ್ಲಾದಿ, ಹಸಲರು ಮತ್ತಿತರ ಹಲವು ಹೆಸರುಗಳಲ್ಲಿ ಹಂಚಿ ಹೋಗಿವೆ. ಸತ್ಯಸಾರಮಾಣಿ ಕುಲದೈವ ಎಂದು ಆರಾಧಿಸುವವರನ್ನು ಆದಿದ್ರಾವಿಡರೆಂದು ಪರಿಗಣಿಸಿ, ನಮ್ಮ ಜಾತಿಗೆ ಆದಿದ್ರಾವಿಡ ಎಂಬ ಜಾತಿ ಪ್ರಮಾಣ ಪತ್ರ ನೀಡಲು ಸರ್ಕಾರ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು, ಸಮುದಾಯದ ವಸತಿ, ಉದ್ಯೋಗ, ಸಾಮಾಜಿಕ, ಶೈಕ್ಷಣಿಕ ಮತ್ತು ಜನಪದೀಯ ಬೆಳವಣಿಗೆಗೆ ₹200 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಹಕ್ಕೊತ್ತಾಯ ಮಂಡಿಸಲಾಗುವುದು’ ಎಂದರು.