ಕಳೆದ ಸಾಲಿನಲ್ಲಿ ಕೃಷಿ ಇಲಾಖೆ ವತಿಯಿಂದ ಮಂಜೂರಾದ ಜಿಲ್ಲೆಯ ಎರಡು ರೈತ ಸಂಪರ್ಕ ಕೇಂದ್ರಗಳ ಗೋದಾಮುಗಳ ಪೈಕಿ ಒಂದು ಗೋದಾಮು ಇಲ್ಲಿ ನಿರ್ಮಾಣವಾಗಿತ್ತು. ಕೆಆರ್ಐಡಿಎಲ್ ವತಿಯಿಂದ ನಿರ್ಮಿತಿ ಕೇಂದ್ರದ ಮೂಲಕ ₹ 15 ಲಕ್ಷ ವೆಚ್ಚದಲ್ಲಿ ಇದು ನಿರ್ಮಾಣವಾಗಿದೆ. ಕಾಂಕ್ರೀಟ್ ಕಟ್ಟಡದಂತೆ ಕಾಣುತ್ತದೆ. ಆದರೆ, ಸಿಮೆಂಟ್, ಇಟ್ಟಿಗೆಯಲ್ಲಿ ಕಟ್ಟಿದ ಗೋಡೆಗೆ ಫೈಬರ್ ಶೀಟ್ ಅಳವಡಿಸಲಾಗಿದೆ. ಎದುರು ಭಾಗದಲ್ಲಿ ಕಾಂಕ್ರೀಟ್ ಕಟ್ಟಡದಂತೆ ಕಾಣುವಂತೆ ತಂತ್ರಜ್ಞಾನ ಅಳವಡಿಸಲಾಗಿದೆ. ಈ ಗೋದಾಮು ತಲುಪಲು ದಾರಿ ಕೂಡ ಸರಿಯಾಗಿಲ್ಲ ಎಂಬುದು ಸ್ಥಳೀಯರ ಆರೋಪ.