<p><strong>ಸುಬ್ರಹ್ಮಣ್ಯ:</strong> ಭಾರತದ ಸಂಸ್ಕೃತಿ ಮತ್ತು ಕೃಷಿ ಅವಿನಾಭಾವ ಸಂಬಂಧ ಇದೆ. ಭಾರತವು ಅನಾದಿಕಾಲದಿಂದಲೂ ಕೃಷಿಯನ್ನೇ ಅವಲಂಬಿಸಿದ್ದು ಅದನ್ನು ಉಳಿಸಲು ಕೃಷಿಗೆ ಹೆಚ್ಚಿನ ಪ್ರಾಧಾನ್ಯತೆ ಕೊಡಬೇಕು. ಈ ಮೂಲಕ ಭಾರತದ ಕೃಷಿ ಪರಂಪರೆ ಮುಂದುವರಿಯಬೇಕು. ಯುವ ಜನತೆ ಕೃಷಿ ಕ್ಷೇತ್ರದಲ್ಲಿ ತೊಡಗಿಕೊಳ್ಳಬೇಕು ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.</p>.<p>ಬಿಳಿನೆಲೆ ಗ್ರಾಮದ ಕಿದು ಸಿ.ಪಿ.ಸಿ.ಆರ್.ಐ. ಸಂಸ್ಥೆಯ ಸುವರ್ಣ ಮಹೋತ್ಸವ ಅಂಗವಾಗಿ ಬುಧವಾರ ನಡೆದ 5 ದಿನಗಳ ಕೃಷಿ ಮೇಳ ಹಾಗೂ ಕೃಷಿ ವಸ್ತು ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಿ.ಪಿ.ಸಿ.ಆರ್.ಐ.ಯ ನಿರ್ದೇಶಕಿ ಡಾ.ಅನಿತಾ ಕರುನ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮತ್ತು ಸಂಸ್ಥೆಯ ಸಿಬ್ಬಂದಿಯನ್ನು ಗೌರವಿಸಲಾಯಿತು. ನಿವೃತ್ತ ವಿಜ್ಞಾನಿ ಡಾ.ಯುದುಕುಮಾರ್, ನಿವೃತ್ತ ಅಧಿಕಾರಿ ಮಂಜುನಾಥ್ ಶೆಟ್ಟಿ, ಸಹಾಯಕ ಆಡಳಿತಾಧಿಕಾರಿ ಟಿ.ಎಚ್. ನಾಗರಾಜ್ ಮಾತನಾಡಿದರು. ಡಾ.ನಿರಳ್ ಕೃಷಿ ಮೇಳದ 5 ದಿನದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ಮನಮೋಹನ್ ಭಟ್ ಸ್ವಾಗತಿಸಿದರು. ನಾರಾಯಣ ನಾಯ್ಕ ವಂದಿಸಿದರು. ಡಾ. ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಬ್ರಹ್ಮಣ್ಯ:</strong> ಭಾರತದ ಸಂಸ್ಕೃತಿ ಮತ್ತು ಕೃಷಿ ಅವಿನಾಭಾವ ಸಂಬಂಧ ಇದೆ. ಭಾರತವು ಅನಾದಿಕಾಲದಿಂದಲೂ ಕೃಷಿಯನ್ನೇ ಅವಲಂಬಿಸಿದ್ದು ಅದನ್ನು ಉಳಿಸಲು ಕೃಷಿಗೆ ಹೆಚ್ಚಿನ ಪ್ರಾಧಾನ್ಯತೆ ಕೊಡಬೇಕು. ಈ ಮೂಲಕ ಭಾರತದ ಕೃಷಿ ಪರಂಪರೆ ಮುಂದುವರಿಯಬೇಕು. ಯುವ ಜನತೆ ಕೃಷಿ ಕ್ಷೇತ್ರದಲ್ಲಿ ತೊಡಗಿಕೊಳ್ಳಬೇಕು ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.</p>.<p>ಬಿಳಿನೆಲೆ ಗ್ರಾಮದ ಕಿದು ಸಿ.ಪಿ.ಸಿ.ಆರ್.ಐ. ಸಂಸ್ಥೆಯ ಸುವರ್ಣ ಮಹೋತ್ಸವ ಅಂಗವಾಗಿ ಬುಧವಾರ ನಡೆದ 5 ದಿನಗಳ ಕೃಷಿ ಮೇಳ ಹಾಗೂ ಕೃಷಿ ವಸ್ತು ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಿ.ಪಿ.ಸಿ.ಆರ್.ಐ.ಯ ನಿರ್ದೇಶಕಿ ಡಾ.ಅನಿತಾ ಕರುನ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮತ್ತು ಸಂಸ್ಥೆಯ ಸಿಬ್ಬಂದಿಯನ್ನು ಗೌರವಿಸಲಾಯಿತು. ನಿವೃತ್ತ ವಿಜ್ಞಾನಿ ಡಾ.ಯುದುಕುಮಾರ್, ನಿವೃತ್ತ ಅಧಿಕಾರಿ ಮಂಜುನಾಥ್ ಶೆಟ್ಟಿ, ಸಹಾಯಕ ಆಡಳಿತಾಧಿಕಾರಿ ಟಿ.ಎಚ್. ನಾಗರಾಜ್ ಮಾತನಾಡಿದರು. ಡಾ.ನಿರಳ್ ಕೃಷಿ ಮೇಳದ 5 ದಿನದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ಮನಮೋಹನ್ ಭಟ್ ಸ್ವಾಗತಿಸಿದರು. ನಾರಾಯಣ ನಾಯ್ಕ ವಂದಿಸಿದರು. ಡಾ. ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>