ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,‘ಭಾರತೀಯ ವಿಜ್ಞಾನ ಮತ್ತು ಧರ್ಮ ಸಂಸ್ಥೆಯು ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜು ಮತ್ತು ಮಂಗಳೂರಿನ ಕಥೊಲಿಕ್ ಚೇರ್ ಸಹಯೋಗದಲ್ಲಿ ಆಯೋಜಿಸಿರುವ ವಿಚಾರ ಸಂಕಿರಣದಲ್ಲಿ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ವಿದ್ವಾಂಸರ ತಂಡ ಭಾಗವಹಿಸಲಿದೆ. ಅಂದು ಬೆಳಿಗ್ಗೆ 9.30ಕ್ಕೆ ನಡೆಯುವ ವಿಚಾರ ಸಂಕಿರಣದಲ್ಲಿ ಕನ್ಹು ಮುರ್ಮು ವಿಶ್ವವಿದ್ಯಾಲಯದ ಕುಲಪತಿ ಡಾ. ಸೊನಾಝಾರಿಯಾ ಮಿಂಝ್, ಎನ್ಐಟಿಕೆ ಪ್ರಾಧ್ಯಾಪಕ ಡಾ. ಆನಂದ್ಕುಮಾರ್ ಭಾಗವಹಿಸುವರು. ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ಮುಖ್ಯಾಧಿಕಾರಿ ಫಾದರ್ ಮೆಲ್ವಿನ್ ಜೋಸೆಫ್ ಪಿಂಟೊ ಅಧ್ಯಕ್ಷತೆ ವಹಿಸುವರು ಎಂದರು.