<p><strong>ಕಾಸರಗೋಡು:</strong> ಜಿಲ್ಲೆಗೆ ಏಮ್ಸ್ ಆಸ್ಪತ್ರೆ ಅನಿವಾರ್ಯವಾಗಿದ್ದು, ಕಳೆದ 5 ವರ್ಷ ಈ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದೆ ಎಂದು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ತಿಳಿಸಿದರು.</p>.<p>ಎಂಡೋಸಲ್ಫಾನ್ ಸಂತ್ರಸ್ತರ ಸಹಿತ ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವ ಜನ ಜಿಲ್ಲೆಯಲ್ಲಿದ್ದು, ಅವರಿಗೆ ಪರಿಣಾಮಕಾರಿ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಏಮ್ಸ್ ಆಸ್ಪತ್ರೆ ಅಗತ್ಯ ಎಂದು ಅವರು ಕಾಞಂಗಾಡು ಪ್ರೆಸ್ ಫಾರಂನಲ್ಲಿ ನಡೆದ ಮುಖಾಮುಖಿ ಕಾರ್ಯಕ್ರಮದಲ್ಲಿ ತಿಳಿಸಿದರು.</p>.<p>ರಾಜ್ಯಾಡಳಿತವು ಕೋಯಿಕೋಡ್ನಲ್ಲಿ ಏಮ್ಸ್ ಆಸ್ಪತ್ರೆ ಸ್ಥಾಪನೆಗೆ ಆಸಕ್ತಿ ಹೊಂದಿದ್ದು, ಕಾಸರಗೋಡಿನ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ. ಜಿಲ್ಲೆಯಲ್ಲಿ ಅನೇಕ ಸರ್ಕಾರಿ ಆಸ್ಪತ್ರೆಗಳಿದ್ದರೂ, ಶಸ್ತ್ರಚಿಕಿತ್ಸೆ ಸಹಿತ ಚಿಕಿತ್ಸೆಗಳಿಗೆ ಸೌಲಭ್ಯಗಳ ಕೊರತೆಯಿದೆ ಎಂದರು.</p>.<p>ರಾಜಕೀಯ ಭಿನ್ನತೆ ಮರೆತು ಎಲ್ಲ ಪಕ್ಷಗಳೂ ಈ ಸಂಬಂಧ ಕೈಜೋಡಿಬೇಕಿದೆ ಎಂದು ಹೇಳಿದರು.</p>.<p>ಟಿ.ಕೆ.ನಾರಾಯಣನ್ ಅಧ್ಯಕ್ಷತೆ ವಹಿಸಿದ್ದರು. ಫಝಲ್ ರಹಮಾನ್, ಬಾಬು ಕೊಟ್ಟಪಾರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು:</strong> ಜಿಲ್ಲೆಗೆ ಏಮ್ಸ್ ಆಸ್ಪತ್ರೆ ಅನಿವಾರ್ಯವಾಗಿದ್ದು, ಕಳೆದ 5 ವರ್ಷ ಈ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದೆ ಎಂದು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ತಿಳಿಸಿದರು.</p>.<p>ಎಂಡೋಸಲ್ಫಾನ್ ಸಂತ್ರಸ್ತರ ಸಹಿತ ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವ ಜನ ಜಿಲ್ಲೆಯಲ್ಲಿದ್ದು, ಅವರಿಗೆ ಪರಿಣಾಮಕಾರಿ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಏಮ್ಸ್ ಆಸ್ಪತ್ರೆ ಅಗತ್ಯ ಎಂದು ಅವರು ಕಾಞಂಗಾಡು ಪ್ರೆಸ್ ಫಾರಂನಲ್ಲಿ ನಡೆದ ಮುಖಾಮುಖಿ ಕಾರ್ಯಕ್ರಮದಲ್ಲಿ ತಿಳಿಸಿದರು.</p>.<p>ರಾಜ್ಯಾಡಳಿತವು ಕೋಯಿಕೋಡ್ನಲ್ಲಿ ಏಮ್ಸ್ ಆಸ್ಪತ್ರೆ ಸ್ಥಾಪನೆಗೆ ಆಸಕ್ತಿ ಹೊಂದಿದ್ದು, ಕಾಸರಗೋಡಿನ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ. ಜಿಲ್ಲೆಯಲ್ಲಿ ಅನೇಕ ಸರ್ಕಾರಿ ಆಸ್ಪತ್ರೆಗಳಿದ್ದರೂ, ಶಸ್ತ್ರಚಿಕಿತ್ಸೆ ಸಹಿತ ಚಿಕಿತ್ಸೆಗಳಿಗೆ ಸೌಲಭ್ಯಗಳ ಕೊರತೆಯಿದೆ ಎಂದರು.</p>.<p>ರಾಜಕೀಯ ಭಿನ್ನತೆ ಮರೆತು ಎಲ್ಲ ಪಕ್ಷಗಳೂ ಈ ಸಂಬಂಧ ಕೈಜೋಡಿಬೇಕಿದೆ ಎಂದು ಹೇಳಿದರು.</p>.<p>ಟಿ.ಕೆ.ನಾರಾಯಣನ್ ಅಧ್ಯಕ್ಷತೆ ವಹಿಸಿದ್ದರು. ಫಝಲ್ ರಹಮಾನ್, ಬಾಬು ಕೊಟ್ಟಪಾರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>