<p><strong>ಮಂಗಳೂರು</strong>: ಬಜಪೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪಕ್ಕದ ಕೆಂಜಾರಿನಲ್ಲಿ 2010ರ ಮೇ 22ರಂದು ಸಂಭವಿಸಿದ ವಿಮಾನ ದುರಂತಕ್ಕೆ ಗುರುವಾರ 15 ವರ್ಷ ತುಂಬಿದೆ. ದುರಂತದಲ್ಲಿ ಮೃತಪಟ್ಟವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p><p>ಕೂಳೂರಿನ ತಣ್ಣೀರುಬಾವಿ ರಸ್ತೆ ಪಕ್ಕದಲ್ಲಿರುವ ಈ ದುರಂತದ ಸ್ಮಾರಕದಲ್ಲಿ ದಕ್ಷಿಣ ಕನ್ನಡದ ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೂಗಳನ್ನು ಅರ್ಪಿಸಿ, ಮೌನ ಪ್ರಾರ್ಥನೆ ಸಲ್ಲಿಸಿದರು.</p><p>ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪಶುಪಾಲನಾ ಮತ್ತು ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಅರುಣ್ ಶೆಟ್ಟಿ, ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಭಾಗವಹಿಸಿದ್ದರು.</p><p>ದುಬೈನಿಂದ ಬಂದಿದ್ದ ಐಎಕ್ಸ್ 812 ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು 2010ರ ಮೇ 22ರಂದು ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಇಳಿಯುವ ವೇಳೆ ಅಪಘಾತಕ್ಕೀಡಾಗಿತ್ತು. ಈ ವಿಮಾನದಲ್ಲಿದ್ದ 166 ಪ್ರಯಾಣಿಕರಲ್ಲಿ 158 ಮಂದಿ ಮೃತಪಟ್ಟಿದ್ದರು. 8 ಪ್ರಯಾಣಿಕರು ಮಾತ್ರ ಬದುಕುಳಿದಿದ್ದರು.</p><p>ದುರಂತದಲ್ಲಿ ಮೃತಪಟ್ಟವರಲ್ಲಿ 12 ಮಂದಿಯ ಮೃತದೇಹಗಳ ಗುರುತು ಪತ್ತೆಯಾಗಿರಲಿಲ್ಲ. ಆ ಮೃತದೇಹಗಳನ್ನು ಕೂಳೂರು ಬಳಿ ತಣ್ಣೀರುಬಾವಿ ರಸ್ತೆ ಪಕ್ಕದಲ್ಲಿ ಹೂಳುವ ಮೂಲಕ ಜಿಲ್ಲಾಡಳಿತವೇ ಅಂತ್ಯಸಂಸ್ಕಾರ ನಡೆಸಿತ್ತು. ಈ ಸ್ಥಳದ ಸಮೀಪದಲ್ಲಿ ಪುಟ್ಟ ಉದ್ಯಾನ ನಿರ್ಮಿಸಿ, ಅದರಲ್ಲಿ ವಿಮಾನ ದುರಂತದ ಸ್ಮಾರಕವೊಂದನ್ನು ನಿರ್ಮಿಸಲಾಗಿತ್ತು. </p><p>‘ಜಿಲ್ಲೆಯಲ್ಲಿ ಸಂಭವಿಸಿರುವ ಅತಿದೊಡ್ಡ ದುರಂತವಿದು. ಇದರಲ್ಲಿ ಮರಣ ಹೊಂದಿದವರ ಕುಟುಂಬದವರಿಗೆ ಆತ್ಮವಿಶ್ವಾಸ ತುಂಬುವ ಸಲುವಾಗಿ ಜಿಲ್ಲಾಡಳಿತವು ಪ್ರತಿ ವರ್ಷವೂ ಮೇ 22ರಂದು ಈ ಶದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ’ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ ಕೆ. ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಬಜಪೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪಕ್ಕದ ಕೆಂಜಾರಿನಲ್ಲಿ 2010ರ ಮೇ 22ರಂದು ಸಂಭವಿಸಿದ ವಿಮಾನ ದುರಂತಕ್ಕೆ ಗುರುವಾರ 15 ವರ್ಷ ತುಂಬಿದೆ. ದುರಂತದಲ್ಲಿ ಮೃತಪಟ್ಟವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p><p>ಕೂಳೂರಿನ ತಣ್ಣೀರುಬಾವಿ ರಸ್ತೆ ಪಕ್ಕದಲ್ಲಿರುವ ಈ ದುರಂತದ ಸ್ಮಾರಕದಲ್ಲಿ ದಕ್ಷಿಣ ಕನ್ನಡದ ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೂಗಳನ್ನು ಅರ್ಪಿಸಿ, ಮೌನ ಪ್ರಾರ್ಥನೆ ಸಲ್ಲಿಸಿದರು.</p><p>ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪಶುಪಾಲನಾ ಮತ್ತು ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಅರುಣ್ ಶೆಟ್ಟಿ, ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಭಾಗವಹಿಸಿದ್ದರು.</p><p>ದುಬೈನಿಂದ ಬಂದಿದ್ದ ಐಎಕ್ಸ್ 812 ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು 2010ರ ಮೇ 22ರಂದು ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಇಳಿಯುವ ವೇಳೆ ಅಪಘಾತಕ್ಕೀಡಾಗಿತ್ತು. ಈ ವಿಮಾನದಲ್ಲಿದ್ದ 166 ಪ್ರಯಾಣಿಕರಲ್ಲಿ 158 ಮಂದಿ ಮೃತಪಟ್ಟಿದ್ದರು. 8 ಪ್ರಯಾಣಿಕರು ಮಾತ್ರ ಬದುಕುಳಿದಿದ್ದರು.</p><p>ದುರಂತದಲ್ಲಿ ಮೃತಪಟ್ಟವರಲ್ಲಿ 12 ಮಂದಿಯ ಮೃತದೇಹಗಳ ಗುರುತು ಪತ್ತೆಯಾಗಿರಲಿಲ್ಲ. ಆ ಮೃತದೇಹಗಳನ್ನು ಕೂಳೂರು ಬಳಿ ತಣ್ಣೀರುಬಾವಿ ರಸ್ತೆ ಪಕ್ಕದಲ್ಲಿ ಹೂಳುವ ಮೂಲಕ ಜಿಲ್ಲಾಡಳಿತವೇ ಅಂತ್ಯಸಂಸ್ಕಾರ ನಡೆಸಿತ್ತು. ಈ ಸ್ಥಳದ ಸಮೀಪದಲ್ಲಿ ಪುಟ್ಟ ಉದ್ಯಾನ ನಿರ್ಮಿಸಿ, ಅದರಲ್ಲಿ ವಿಮಾನ ದುರಂತದ ಸ್ಮಾರಕವೊಂದನ್ನು ನಿರ್ಮಿಸಲಾಗಿತ್ತು. </p><p>‘ಜಿಲ್ಲೆಯಲ್ಲಿ ಸಂಭವಿಸಿರುವ ಅತಿದೊಡ್ಡ ದುರಂತವಿದು. ಇದರಲ್ಲಿ ಮರಣ ಹೊಂದಿದವರ ಕುಟುಂಬದವರಿಗೆ ಆತ್ಮವಿಶ್ವಾಸ ತುಂಬುವ ಸಲುವಾಗಿ ಜಿಲ್ಲಾಡಳಿತವು ಪ್ರತಿ ವರ್ಷವೂ ಮೇ 22ರಂದು ಈ ಶದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ’ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ ಕೆ. ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>