<p><strong>ಮಂಗಳೂರು:</strong> ಬಿಸಿಯೂಟ ನೌಕರರಿಗೆ ಏಪ್ರಿಲ್ನಿಂದ ಶಾಲೆ ಆರಂಭವಾಗುವವರೆಗೆ ವೇತನ ಪಾವತಿ ಹಾಗೂ ಇತರ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಸೋಮವಾರ ಇಲ್ಲಿನ ಮಿನಿ ವಿಧಾನಸೌಧದ ಎದುರು ಧರಣಿ ನಡೆಸಲಾಯಿತು.</p>.<p>ಸಿಐಟಿಯು ಜಿಲ್ಲಾ ಘಟಕದ ಉಪಾಧ್ಯಕ್ಷ ವಸಂತ ಆಚಾರಿ ಮಾತನಾಡಿ, ‘ಬಿಸಿಯೂಟ ಯೋಜನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು ನಾಲ್ಕು ತಿಂಗಳಿನಿಂದ ಆದಾಯವಿಲ್ಲದೇ ಸಂಕಷ್ಟದ ಸ್ಥಿತಿಗೆ ತಲುಪಿದ್ದಾರೆ. ಅವರ ಸ್ಥಿತಿಯನ್ನು ಸರ್ಕಾರ ಅರ್ಥ ಮಾಡಿಕೊಂಡು ವೇತನ ಪಾವತಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘದ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ ಮಾತನಾಡಿ, ‘ಕೊರೊನಾದಿಂದಾಗಿ ಅಕ್ಷರ ದಾಸೋಹ ನೌಕರರಿಗೆ ಕೆಲಸ ಹಾಗೂ ವೇತನ ಇಲ್ಲದಂತಾಗಿದೆ. ಲಾಕ್ಡೌನ್ ಹಾಗೂ ಬೇಸಿಗೆ ರಜೆಯ ಪರಿಹಾರವನ್ನು ನೀಡುವಂತೆ ವಿನಂತಿಸಿದರೂ, ಲಕ್ಷಾಂತರ ಕಾರ್ಮಿಕರಿಗೆ ಪರಿಹಾರ ನೀಡಿಲ್ಲ. ಈ ಬಗ್ಗೆ ಸರ್ಕಾರ ಗಮನಹರಿಸಿ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ವೇತನ ಪಾವತಿಸುವ ತನಕ ರಾಜ್ಯದ ಎಲ್ಲ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಎದುರು ಸರಣಿ ಉಪವಾಸ ಸತ್ಯಾಗ್ರಹ ನಡೆಸಲು ಸಂಘಟನೆ ತೀರ್ಮಾನಿಸಿದೆ ಎಂದರು.</p>.<p>ಸಂಘದ ಮುಖಂಡರಾದ ರೇಖಾಲತಾ, ಶಮೀನಾ ಬಾನು, ರತ್ನಮಾಲಾ, ರೆಮಿಝಾ, ಉಮಾವತಿ, ಅಂಜಲಿ, ಭವಾನಿ, ಪಾರ್ವತಿ, ಅನುರಾಧಾ ಅರುಣಾ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಬಿಸಿಯೂಟ ನೌಕರರಿಗೆ ಏಪ್ರಿಲ್ನಿಂದ ಶಾಲೆ ಆರಂಭವಾಗುವವರೆಗೆ ವೇತನ ಪಾವತಿ ಹಾಗೂ ಇತರ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಸೋಮವಾರ ಇಲ್ಲಿನ ಮಿನಿ ವಿಧಾನಸೌಧದ ಎದುರು ಧರಣಿ ನಡೆಸಲಾಯಿತು.</p>.<p>ಸಿಐಟಿಯು ಜಿಲ್ಲಾ ಘಟಕದ ಉಪಾಧ್ಯಕ್ಷ ವಸಂತ ಆಚಾರಿ ಮಾತನಾಡಿ, ‘ಬಿಸಿಯೂಟ ಯೋಜನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು ನಾಲ್ಕು ತಿಂಗಳಿನಿಂದ ಆದಾಯವಿಲ್ಲದೇ ಸಂಕಷ್ಟದ ಸ್ಥಿತಿಗೆ ತಲುಪಿದ್ದಾರೆ. ಅವರ ಸ್ಥಿತಿಯನ್ನು ಸರ್ಕಾರ ಅರ್ಥ ಮಾಡಿಕೊಂಡು ವೇತನ ಪಾವತಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘದ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ ಮಾತನಾಡಿ, ‘ಕೊರೊನಾದಿಂದಾಗಿ ಅಕ್ಷರ ದಾಸೋಹ ನೌಕರರಿಗೆ ಕೆಲಸ ಹಾಗೂ ವೇತನ ಇಲ್ಲದಂತಾಗಿದೆ. ಲಾಕ್ಡೌನ್ ಹಾಗೂ ಬೇಸಿಗೆ ರಜೆಯ ಪರಿಹಾರವನ್ನು ನೀಡುವಂತೆ ವಿನಂತಿಸಿದರೂ, ಲಕ್ಷಾಂತರ ಕಾರ್ಮಿಕರಿಗೆ ಪರಿಹಾರ ನೀಡಿಲ್ಲ. ಈ ಬಗ್ಗೆ ಸರ್ಕಾರ ಗಮನಹರಿಸಿ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ವೇತನ ಪಾವತಿಸುವ ತನಕ ರಾಜ್ಯದ ಎಲ್ಲ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಎದುರು ಸರಣಿ ಉಪವಾಸ ಸತ್ಯಾಗ್ರಹ ನಡೆಸಲು ಸಂಘಟನೆ ತೀರ್ಮಾನಿಸಿದೆ ಎಂದರು.</p>.<p>ಸಂಘದ ಮುಖಂಡರಾದ ರೇಖಾಲತಾ, ಶಮೀನಾ ಬಾನು, ರತ್ನಮಾಲಾ, ರೆಮಿಝಾ, ಉಮಾವತಿ, ಅಂಜಲಿ, ಭವಾನಿ, ಪಾರ್ವತಿ, ಅನುರಾಧಾ ಅರುಣಾ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>