<p><strong>ಪುತ್ತೂರು:</strong> ಹತ್ಯೆಗೊಳಗಾದ ಅಕ್ಷಯ್ ಕಲ್ಲೇಗ ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿ ನ.7ರಂದು ವಿಚಾರಣೆ ಸಲುವಾಗಿ ನ್ಯಾಯಾಲಯಕ್ಕೆ ಬರುತ್ತೇನೆ ಎಂದು ಕೊಲೆಯಾಗುವ ದಿನವೇ ವಕೀಲರೊಬ್ಬರಿಗೆ ವಾಟ್ಸಪ್ ಮೂಲಕ ಸಂದೇಶ ಕಳುಹಿಸಿದ್ದರು ಎಂದು ಗೊತ್ತಾಗಿದೆ.</p> <p>ಅಕ್ಷಯ್ ಕಲ್ಲೇಗ ಅವರು ಕಾಲೇಜು ಶಿಕ್ಷಣ ಪಡೆಯುತ್ತಿದ್ದ ವೇಳೆ 2018ರಲ್ಲಿ ವಿದ್ಯಾರ್ಥಿಗಳ ನಡುವೆ ಪಿ.ಜಿಯೊಂದರಲ್ಲಿ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಅಕ್ಷಯ್ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ಪುತ್ತೂರು ಜಿಲ್ಲಾ 5ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಸ್ತುತ ಈ ನ್ಯಾಯಾಲಯದ ನ್ಯಾಯಾಧೀಶರು ರಜೆಯಲ್ಲಿರುವ ಹಿನ್ನೆಲೆಯಲ್ಲಿ ಪ್ರಭಾರ ಹೊಂದಿರುವ ಮಂಗಳೂರು ಜಿಲ್ಲಾ ಆರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.</p><p>ವಕೀಲರು ನ.7ರಂದು ವಿಚಾರಣೆಗೆ ಹಾಜರಾಗುವಂತೆ ಅಕ್ಷಯ್ ಅವರಿಗೆ ತಿಳಿಸಿದ್ದರು. ‘ನಾಳೆ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಆಗಬಹುದಾ' ಎಂದು ಅಕ್ಷಯ್ ವಕೀಲರಲ್ಲಿ ಕೇಳಿದ್ದರು. ‘ನಾಳೆ ಹಾಜರಾಗಲೇಬೇಕು’ ಎಂದು ವಕೀಲರು ಹೇಳಿದ್ದರು. `ಆಯಿತು ನಾಳೆ ಹಾಜರಾಗುತ್ತೇನೆ' ಎಂದು ಅಕ್ಷಯ್ ಅವರು ನ.6ರಂದು ಸಂಜೆ ವಾಟ್ಸಾಪ್ನಲ್ಲಿ ವಕೀಲರಿಗೆ ಸಂದೇಶ ಕಳುಹಿಸಿದ್ದರು. ಆದರೆ ಅದೇ ದಿನ ರಾತ್ರಿ ಅವರ ಕೊಲೆ ನಡೆದಿದೆ.</p><p>ಅಕ್ಷಯ್ ಕಲ್ಲೇಗ ವ್ಯಾಪ್ತಿಯ ಹಲವಾರು ಯುವಕರ ತಂಡವನ್ನು ಕಟ್ಟಿಕೊಂಡಿದ್ದರು. ಅವರ ನೇತೃತ್ವದ ‘ಕಲ್ಲೇಗ ಟೈಗರ್ಸ್’ ಹುಲಿ ವೇಷಧಾರಿಗಳ ಬಳಗದಲ್ಲಿಯೂ ಹಲವು ಮಂದಿ ಯುವಕರಿದ್ದರು. ಕಾಲೇಜು ವಿದ್ಯಾರ್ಥಿಯಾಗಿದ್ದಾಗಲೇ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದರು ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಹತ್ಯೆಗೊಳಗಾದ ಅಕ್ಷಯ್ ಕಲ್ಲೇಗ ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿ ನ.7ರಂದು ವಿಚಾರಣೆ ಸಲುವಾಗಿ ನ್ಯಾಯಾಲಯಕ್ಕೆ ಬರುತ್ತೇನೆ ಎಂದು ಕೊಲೆಯಾಗುವ ದಿನವೇ ವಕೀಲರೊಬ್ಬರಿಗೆ ವಾಟ್ಸಪ್ ಮೂಲಕ ಸಂದೇಶ ಕಳುಹಿಸಿದ್ದರು ಎಂದು ಗೊತ್ತಾಗಿದೆ.</p> <p>ಅಕ್ಷಯ್ ಕಲ್ಲೇಗ ಅವರು ಕಾಲೇಜು ಶಿಕ್ಷಣ ಪಡೆಯುತ್ತಿದ್ದ ವೇಳೆ 2018ರಲ್ಲಿ ವಿದ್ಯಾರ್ಥಿಗಳ ನಡುವೆ ಪಿ.ಜಿಯೊಂದರಲ್ಲಿ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಅಕ್ಷಯ್ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ಪುತ್ತೂರು ಜಿಲ್ಲಾ 5ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಸ್ತುತ ಈ ನ್ಯಾಯಾಲಯದ ನ್ಯಾಯಾಧೀಶರು ರಜೆಯಲ್ಲಿರುವ ಹಿನ್ನೆಲೆಯಲ್ಲಿ ಪ್ರಭಾರ ಹೊಂದಿರುವ ಮಂಗಳೂರು ಜಿಲ್ಲಾ ಆರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.</p><p>ವಕೀಲರು ನ.7ರಂದು ವಿಚಾರಣೆಗೆ ಹಾಜರಾಗುವಂತೆ ಅಕ್ಷಯ್ ಅವರಿಗೆ ತಿಳಿಸಿದ್ದರು. ‘ನಾಳೆ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಆಗಬಹುದಾ' ಎಂದು ಅಕ್ಷಯ್ ವಕೀಲರಲ್ಲಿ ಕೇಳಿದ್ದರು. ‘ನಾಳೆ ಹಾಜರಾಗಲೇಬೇಕು’ ಎಂದು ವಕೀಲರು ಹೇಳಿದ್ದರು. `ಆಯಿತು ನಾಳೆ ಹಾಜರಾಗುತ್ತೇನೆ' ಎಂದು ಅಕ್ಷಯ್ ಅವರು ನ.6ರಂದು ಸಂಜೆ ವಾಟ್ಸಾಪ್ನಲ್ಲಿ ವಕೀಲರಿಗೆ ಸಂದೇಶ ಕಳುಹಿಸಿದ್ದರು. ಆದರೆ ಅದೇ ದಿನ ರಾತ್ರಿ ಅವರ ಕೊಲೆ ನಡೆದಿದೆ.</p><p>ಅಕ್ಷಯ್ ಕಲ್ಲೇಗ ವ್ಯಾಪ್ತಿಯ ಹಲವಾರು ಯುವಕರ ತಂಡವನ್ನು ಕಟ್ಟಿಕೊಂಡಿದ್ದರು. ಅವರ ನೇತೃತ್ವದ ‘ಕಲ್ಲೇಗ ಟೈಗರ್ಸ್’ ಹುಲಿ ವೇಷಧಾರಿಗಳ ಬಳಗದಲ್ಲಿಯೂ ಹಲವು ಮಂದಿ ಯುವಕರಿದ್ದರು. ಕಾಲೇಜು ವಿದ್ಯಾರ್ಥಿಯಾಗಿದ್ದಾಗಲೇ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದರು ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>