ಜೋಕಟ್ಟೆ ನಿವಾಸಿ ಅಬ್ದುಲ್ ರಹ್ಮಾನ್ ಭಾನುವಾರ ಬೆಳಿಗ್ಗೆ ತನ್ನ ಮನೆಯಲ್ಲಿದ್ದ ನಾಲ್ಕು ಎಮ್ಮೆಗಳನ್ನು ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದರು. ಈ ನಡುವೆ, ಬಜರಂಗದಳದ ಕಾರ್ಯಕರ್ತರು ನಗರದ ಉರ್ವದ ಇನ್ಫೊಸಿಸ್ ಕಚೇರಿಯ ಸಮೀಪ ವಾಹನವನ್ನು ತಡೆದು ನಿಲ್ಲಿಸಿದ್ದು, ವಾಹನದಿಂದ ರಹ್ಮಾನ್ ಅವರನ್ನು ಕೆಳಗೆ ಇಳಿಸಿ, ವಾಹನಕ್ಕೆ ಕಟ್ಟಿ ಥಳಿಸಿದ್ದಾರೆ ಎನ್ನಲಾಗಿದೆ.