ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಇಲ್ಲಿಯ ವಿದ್ಯಾಗಿರಿಯಲ್ಲಿ ನವೆಂಬರ್ 15ರಂದು ನಡೆಯಲಿರುವ 'ಆಳ್ವಾಸ್ ವಿದ್ಯಾರ್ಥಿಸಿರಿ–2018' ಸಮ್ಮೇಳನದ ಅಧ್ಯಕ್ಷರಾಗಿ ಕಾಸರಗೋಡಿನ ಪ್ರೌಢಶಾಲಾ ವಿದ್ಯಾರ್ಥಿನಿ ಸನ್ನಿಧಿ ಟಿ.ರೈ ಪೆರ್ಲ ಆಯ್ಕೆಯಾಗಿದ್ದಾರೆ.
ಕವಿಗೋಷ್ಠಿಯ ಅಧ್ಯಕ್ಷತೆಗೆ ಬೆಳ್ತಂಗಡಿ ಉಜಿರೆಯ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭಾರ್ಗವಿ ಶಬರಾಯ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಅಧ್ಯಕ್ಷರಾದಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ.
ಸಮ್ಮೇಳನದಲ್ಲಿ ನಡೆಯುವ ಸಂವಾದ ಗೋಷ್ಠಿಯ ಅಧ್ಯಕ್ಷತೆಗೆ ಉಜಿರೆ ಎಸ್ಡಿಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶಾಮ್ ಪ್ರಸಾದ್ ಹಾಗೂ ಸಮಾರೋಪ ಭಾಷಣಕ್ಕೆ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ದೀಕ್ಷಿತ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.