‘15ರಂದು ಸಂಜೆ 6ರಿಂದ ಬೆನ್ನಿ ದಯಾಳ್ ಅವರು ‘ಗಾನ ವೈಭವ’ವನ್ನು, 16ರಂದು ಶ್ರೇಯಾ ಘೋಷಾಲ್ ಅವರು ‘ಭಾವ ಲಹರಿ’ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಇದೇ 17ರಂದು ಮೈಸೂರು ಮಂಜುನಾಥ್, ಪ್ರವೀಣ್ ಗೋಡ್ಖಿಂಡಿ ಹಾಗೂ ವಿಜಯ ಪ್ರಕಾಶ್ ಅವರು ತಾಳ ವಾದ್ಯ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಪ್ರತಿ ದಿನವೂ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ. ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿಗಳ ಪ್ರದರ್ಶನ, ಛಾಯಾಚಿತ್ರ ಪ್ರದರ್ಶನಗಳು ವಿರಾಸತ್ಗೆ ಮೆರುಗು ತುಂಬಲಿವೆ’ ಎಂದು ಹೇಳಿದರು.