ಇತ್ತೀಚೆಗೆ ಈ ಚಿತ್ರಮಂದಿರವನ್ನು ಬಿಟ್ಟುಕೊಡುವಂತೆ ಮಾಲೀಕರು ಕೇಳಿದ್ದಾರೆ ಎನ್ನಲಾಗಿದ್ದು, ಈ ವಿಚಾರದಲ್ಲಿ ಎರಡೂ ಕಡೆಯವರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿತ್ತು ಎನ್ನಲಾಗಿದೆ. ಈ ಬಗ್ಗೆ ಮಾಲೀಕರದಾದ ಡಾ.ಅಮರಶ್ರೀ ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.
2022ರಿಂದ ಪರವಾನಗಿ ನವೀಕರಿಸದೆ ಇರುವುದು ಮತ್ತು ಚಿತ್ರಮಂದಿರವನ್ನು ಸರಿಯಾಗಿ ನಿರ್ವಹಣೆ ಮಾಡದೆ ಇರುವ ಕಾರಣ ನೀಡಿ ಚಿತ್ರಮಂದಿರಕ್ಕೆ ಬೀಗ ಹಾಕುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದರು.