<p><strong>ಬೆಳ್ತಂಗಡಿ:</strong> ತಾಲ್ಲೂಕಿನ ಕಲ್ಮಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಿಂದ 1 ಕಿ.ಮೀ. ದೂರದಲ್ಲಿರುವ ಅಂಬಡಬೆಟ್ಟು ಸೇತುವೆ ಶಿಥಿಲಗೊಂಡಿದೆ.</p>.<p>ಈ ಸೇತುವೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿದ್ದು, ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ, ಸಂಚಾರ ಮಾರ್ಗ ಬದಲಾಯಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.</p>.<p>ಉಜಿರೆ - ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯನ್ನು ಬಳಸಿ ಸಂಚರಿಸಬಹುದು. ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ದ್ವಾರದಿಂದ, ಸುರ್ಯ ದೇವಸ್ಥಾನ ಮಾರ್ಗವಾಗಿ, ಕೇಳ್ತಾಜೆ ಮೂಲಕ ಸಂಚರಿಸಬೇಕು. ಬೆಳ್ತಂಗಡಿ- ಕಿಲ್ಲೂರು-ಕಾಜೂರು ರಸ್ತೆಯ ಇಂದಬೆಟ್ಟು ಗ್ರಾಮದಿಂದ ನೇತ್ರಾವತಿ ಎಸ್.ಟಿ.ಕಾಲೊನಿ ಮಾರ್ಗವಾಗಿ ಬೆಳ್ಳೂರು ಕ್ರಾಸ್ ರಸ್ತೆಯಾಗಿ, ರಾಜ್ಯ ಹೆದ್ದಾರಿ-276ರ ಧರ್ಮಸ್ಥಳ, ಮುಂಡಾಜೆ, ದಿಡುಪೆ ರಸ್ತೆಯನ್ನು ಸಂಪರ್ಕಿಸುವಂತೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ:</strong> ತಾಲ್ಲೂಕಿನ ಕಲ್ಮಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಿಂದ 1 ಕಿ.ಮೀ. ದೂರದಲ್ಲಿರುವ ಅಂಬಡಬೆಟ್ಟು ಸೇತುವೆ ಶಿಥಿಲಗೊಂಡಿದೆ.</p>.<p>ಈ ಸೇತುವೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿದ್ದು, ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ, ಸಂಚಾರ ಮಾರ್ಗ ಬದಲಾಯಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.</p>.<p>ಉಜಿರೆ - ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯನ್ನು ಬಳಸಿ ಸಂಚರಿಸಬಹುದು. ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ದ್ವಾರದಿಂದ, ಸುರ್ಯ ದೇವಸ್ಥಾನ ಮಾರ್ಗವಾಗಿ, ಕೇಳ್ತಾಜೆ ಮೂಲಕ ಸಂಚರಿಸಬೇಕು. ಬೆಳ್ತಂಗಡಿ- ಕಿಲ್ಲೂರು-ಕಾಜೂರು ರಸ್ತೆಯ ಇಂದಬೆಟ್ಟು ಗ್ರಾಮದಿಂದ ನೇತ್ರಾವತಿ ಎಸ್.ಟಿ.ಕಾಲೊನಿ ಮಾರ್ಗವಾಗಿ ಬೆಳ್ಳೂರು ಕ್ರಾಸ್ ರಸ್ತೆಯಾಗಿ, ರಾಜ್ಯ ಹೆದ್ದಾರಿ-276ರ ಧರ್ಮಸ್ಥಳ, ಮುಂಡಾಜೆ, ದಿಡುಪೆ ರಸ್ತೆಯನ್ನು ಸಂಪರ್ಕಿಸುವಂತೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>