ಅಡಿಕೆ ವಹಿವಾಟು ನಡೆಸುವ ಕ್ಯಾಂಪ್ಕೊ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಫೆ.11ರಂದು ಬರುವ ಅಮಿತ್ ಶಾ, ಅಲ್ಲಿಂದ ನೇರವಾಗಿ ಸಂಜೆ 5.20ಕ್ಕೆ ಮಂಗಳೂರಿಗೆ ಬರಲಿದ್ದಾರೆ. ನಗರದ ಹೊರವಲಯದ ಕೆಂಜಾರಿನಲ್ಲಿ ನಡೆಯುವ ವಿಶೇಷ ಸಭೆಯಲ್ಲಿ ಕೆಲಕಾಲ ಮಾತನಾಡಿ, ಅವರು ನಂತರ ಶ್ರೀದೇವಿ ಕಾಲೇಜಿನಲ್ಲಿ ನಡೆಯುವ ‘ಮಂಗಳೂರು, ಶಿವಮೊಗ್ಗ ವಿಭಾಗಗಳ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.