<p>ಮೂಡುಬಿದಿರೆ: ‘ಅರ್ಜಿ ಹಾಕದೆ ಸಿಗುವ ಪ್ರಶಸ್ತಿಗೆ ಗೌರವ ಹೆಚ್ಚು’ ಎಂದು ಅಜಕ್ಕಳ ಗಿರೀಶ ಭಟ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಸಮಾಜ ಮಂದಿರದಲ್ಲಿ ನಡೆದ ದಸರಾ ಮಹೋತ್ಸವದಲ್ಲಿ ಮೂಡುಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠದ 2022ನೇ ಸಾಲಿನ ‘ವರ್ಧಮಾನ ಸಾಹಿತ್ಯ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡಿದರು. ಬೆಂಗಳೂರಿನ <br />ಎಂ. ಆರ್.ದತ್ತಾತ್ರಿ ಅವರಿಗೆ ‘ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<p>ಮೂಡುಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಾತನಾಡಿ, ‘ಮಾನವತೆಯನ್ನು ಪೋಷಿಸುವ ಸಾಹಿತ್ಯ ಇಂದಿನ ಅಗತ್ಯವಾಗಿದೆ. ಅಂತಹ ಮಾನವೀಯ ಸಾಹಿತ್ಯ ಅರಳಿಸುವ ಸಾಹಿತಿಗಳನ್ನು ಜಗತ್ತು ಗೌರವಿಸಬೇಕು’ ಎಂದರು.</p>.<p>ವರ್ಧಮಾನ ಪ್ರಶಸ್ತಿ ಪೀಠದ ಅಧ್ಯಕ್ಷ ಎಸ್.ಡಿ. ಸಂಪತ್ ಸಾಮ್ರಾಜ್ಯ ಅಧ್ಯಕ್ಷತೆ ವಹಿಸಿದ್ದರು. ಪೀಠದ ಪ್ರಧಾನ ನಿದೇಶಕ ಡಾ. ನಾ.ಮೊಗಸಾಲೆ ಸ್ವಾಗತಿಸಿದರು. ಸಹ ನಿದೇರ್ಶಕ ಸದಾನಂದ ನಾರಾವಿ ಪ್ರಶಸ್ತಿ ಪತ್ರ ವಾಚಿಸಿದರು. ಮುನಿರಾಜ ರೆಂಜಾಳ ನಿರೂಪಿಸಿದರು. ಕೋಶಾಧ್ಯಕ್ಷ ನಮಿರಾಜ ಶೆಟ್ಟಿ ವಂದಿಸಿದರು.</p>.<p>ವರ್ಧಮಾನ ಸಾಹಿತ್ಯ ಪ್ರಶಸ್ತಿಯು ₹25 ಸಾವಿರ ನಗದು, ತಾಮ್ರಪತ್ರ ಒಳಗೊಂಡಿದೆ. ‘ಪ್ರಶಸ್ತಿ ಮೊತ್ತವನ್ನು ಕಾಲೇಜಿನಲ್ಲೂ ಶುಲ್ಕ ಕಟ್ಟಲಾಗದ ವಿದ್ಯಾರ್ಥಿಗಳಿಗೆ, ಸಂಶೋಧನಾತ್ಮ ಬರಹಗಳ ‘ಚಿಂತನ ಬಯಲು’ ಎಂಬ ತ್ರೈಮಾಸಿಕ ಪತ್ರಿಕೆಗೆ ವಿನಿಯೋಗಿಸುವುದಾಗಿ ಅಜಕ್ಕಳ ಗಿರೀಶ ಭಟ್ ಹೇಳಿದರು.</p>.<p>ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯು ₹15 ಸಾವಿರ ನಗದು, ತಾಮ್ರಪತ್ರ, ಸನ್ಮಾನ ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೂಡುಬಿದಿರೆ: ‘ಅರ್ಜಿ ಹಾಕದೆ ಸಿಗುವ ಪ್ರಶಸ್ತಿಗೆ ಗೌರವ ಹೆಚ್ಚು’ ಎಂದು ಅಜಕ್ಕಳ ಗಿರೀಶ ಭಟ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಸಮಾಜ ಮಂದಿರದಲ್ಲಿ ನಡೆದ ದಸರಾ ಮಹೋತ್ಸವದಲ್ಲಿ ಮೂಡುಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠದ 2022ನೇ ಸಾಲಿನ ‘ವರ್ಧಮಾನ ಸಾಹಿತ್ಯ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡಿದರು. ಬೆಂಗಳೂರಿನ <br />ಎಂ. ಆರ್.ದತ್ತಾತ್ರಿ ಅವರಿಗೆ ‘ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<p>ಮೂಡುಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಾತನಾಡಿ, ‘ಮಾನವತೆಯನ್ನು ಪೋಷಿಸುವ ಸಾಹಿತ್ಯ ಇಂದಿನ ಅಗತ್ಯವಾಗಿದೆ. ಅಂತಹ ಮಾನವೀಯ ಸಾಹಿತ್ಯ ಅರಳಿಸುವ ಸಾಹಿತಿಗಳನ್ನು ಜಗತ್ತು ಗೌರವಿಸಬೇಕು’ ಎಂದರು.</p>.<p>ವರ್ಧಮಾನ ಪ್ರಶಸ್ತಿ ಪೀಠದ ಅಧ್ಯಕ್ಷ ಎಸ್.ಡಿ. ಸಂಪತ್ ಸಾಮ್ರಾಜ್ಯ ಅಧ್ಯಕ್ಷತೆ ವಹಿಸಿದ್ದರು. ಪೀಠದ ಪ್ರಧಾನ ನಿದೇಶಕ ಡಾ. ನಾ.ಮೊಗಸಾಲೆ ಸ್ವಾಗತಿಸಿದರು. ಸಹ ನಿದೇರ್ಶಕ ಸದಾನಂದ ನಾರಾವಿ ಪ್ರಶಸ್ತಿ ಪತ್ರ ವಾಚಿಸಿದರು. ಮುನಿರಾಜ ರೆಂಜಾಳ ನಿರೂಪಿಸಿದರು. ಕೋಶಾಧ್ಯಕ್ಷ ನಮಿರಾಜ ಶೆಟ್ಟಿ ವಂದಿಸಿದರು.</p>.<p>ವರ್ಧಮಾನ ಸಾಹಿತ್ಯ ಪ್ರಶಸ್ತಿಯು ₹25 ಸಾವಿರ ನಗದು, ತಾಮ್ರಪತ್ರ ಒಳಗೊಂಡಿದೆ. ‘ಪ್ರಶಸ್ತಿ ಮೊತ್ತವನ್ನು ಕಾಲೇಜಿನಲ್ಲೂ ಶುಲ್ಕ ಕಟ್ಟಲಾಗದ ವಿದ್ಯಾರ್ಥಿಗಳಿಗೆ, ಸಂಶೋಧನಾತ್ಮ ಬರಹಗಳ ‘ಚಿಂತನ ಬಯಲು’ ಎಂಬ ತ್ರೈಮಾಸಿಕ ಪತ್ರಿಕೆಗೆ ವಿನಿಯೋಗಿಸುವುದಾಗಿ ಅಜಕ್ಕಳ ಗಿರೀಶ ಭಟ್ ಹೇಳಿದರು.</p>.<p>ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯು ₹15 ಸಾವಿರ ನಗದು, ತಾಮ್ರಪತ್ರ, ಸನ್ಮಾನ ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>